Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮನೆಯೊಂದರಲ್ಲಿ ಸಿಕ್ತು ಚೀಲಗಟ್ಟಲೆ ಹಣ.! ಎಷ್ಟು ಕೋಟಿ.?

 

ಧಾರವಾಡ: ನಗರದ ನಾರಾಯಣಪುರ ಮುಖ್ಯರಸ್ತೆಯ ಆರ್ನಾ ರೆಸಿಡೆನ್ಸಿಯ ಮೂರನೇ ಅಂತಸ್ತಿನ ಮನೆಯೊಂದರಲ್ಲಿ ಮಂಗಳವಾರ ರಾತ್ರಿ ಚೀಲಗಳಲ್ಲಿ ಹಣದ ಕಂತೆಗಳು ಪತ್ತೆಯಾಗಿವೆ.

ಮನೆಯಲ್ಲಿ ಮದ್ಯ ಸಂಗ್ರಹಿಸಲಾಗಿದೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಅಬಕಾರಿ ಅಧಿಕಾರಿಗಳು ಮನೆಗೆ ತೆರಳಿ ತಪಾಸಣೆ ನಡೆಸಿದರು. ಆಗ ತಿಜೋರಿಯ ಚೀಲಗಳಲ್ಲಿ ಹಣದ ಕಂತೆಗಳು ಸಿಕ್ಕವು. ಆದಾಯ ತೆರಿಗೆ, ವಿಚಕ್ಷಣ ದಳ ಮತ್ತು ಅಬಕಾರಿ ಅಧಿಕಾರಿಗಳು ಪರಿಶೀಲನೆ ನಡೆಸಿದರು. ರಾತ್ರಿ 10ರ ನಂತರವೂ ಪರಿಶೀಲನೆ, ಎಣಿಕೆ ಪ್ರಕ್ರಿಯೆ ನಡೆಯಿತು.

ಮನೆಯೊಂದರಲ್ಲಿ ಸಿಕ್ಕ ಹಣವನ್ನು ಆದಾಯ ತೆರಿಗೆ ಅಧಿಕಾರಿಗಳು ಎಣಿಸುತ್ತಿದ್ದಾರೆ. ಎಷ್ಟು ಹಣ ಸಿಕ್ಕಿದೆ ಮತ್ತು ಯಾರದ್ದು ಎಂಬುದರ ಬಗ್ಗೆ ನಿಖರ ಮಾಹಿತಿ ಇಲ್ಲ  ಆದರೆ ಸುಮಾರು ₹ 18 ಕೋಟಿ ಹಣ ಇದೆ ಎಂದು ತಿಳಿದುಬಂದಿದೆ. ಎಣಿಕೆ ಪೂರ್ಣಗೊಂಡ ಬಳಿಕ ನಿಖರ ಮಾಹಿತಿ ಸಿಗಲಿದೆ.