Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮರಕ್ಕೆ ಗುದ್ದಿದ ಗಾಡಿ : ಮಗು ಸೇರಿ ಒಂದೇ ಕುಟುಂಬದ ಐವರು ಸಾವು

ಉತ್ತರ ಪ್ರದೇಶದ ಹರ್ದೋಯಿನಲ್ಲಿ ಮರವೊಂದಕ್ಕೆ ವಾಹನ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಸೋಮವಾರ ನಿನ್ನೆ ಸಂಜೆ ಬಿಲ್ಹುರ್-ಕತ್ರಾ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದೆ. ರಸ್ತೆ ಅಪಘಾತದಲ್ಲಿ ನಾಲ್ವರು ವಯಸ್ಕರು ಹಾಗೂ ನಾಲ್ಕು ವರ್ಷದ ಒಂದು ಮಗು ಮೃತಪಟ್ಟಿದೆ. ಇವರು ನಯಾಗಾಂವ್​ನ ಬರಕನಾಥ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಹರ್ದೋಯಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದುರ್ಗೇಶ್ ಕುಮಾರ್ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ.