Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ : ಸಿಐಡಿಗೆ ಹಸ್ತಾಂತರ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಅಧಿಕೃತವಾಗಿ ಬೆಂಗಳೂರಿನ ಸಿಐಡಿ ಕಚೇರಿಗೆ ತೆರಳಿ ಕೇಸ್‍ನ ಕಡತಗಳನ್ನು ತನಿಖಾಧಿಕಾರಿ ಹಾಗೂ ಎಸಿಪಿ ಗಿರೀಶ್ ಅವರಿಗೆ ಹಸ್ತಾಂತರಿಸಲಾಗಿದೆ.

ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸುವ ವಿಚಾರವಾಗಿ ಗದಗದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ತನಿಖೆಯನ್ನು ಎಲ್ಲಿಗೆ ಬೇಕಾದರೂ ವಹಿಸಲು ತಯಾರಾಗಿದ್ದೇನೆ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಪ್ರಕರಣದ ತನಿಖೆ ಮಾಡಲು ನಮ್ಮ ಪೊಲೀಸರು ಸಮರ್ಥರಿದ್ದಾರೆ. ಸಾಕ್ಷ್ಯ ಸಂಗ್ರಹಿಸಿ ಶಿಕ್ಷೆ ಕೊಡಿಸಲು ಪೊಲೀಸರೇ ತಯಾರಾಗಿದ್ದಾರೆ ಎಂದು ಹೇಳಿದ್ದರು.

ಘಟನೆ ನಡೆದ ಬಳಿಕ ಪೊಲೀಸರು ಏನೆಲ್ಲಾ ಮಾಡಿದ್ದಾರೆ. ಬಳಿಕ ಯಾವೆಲ್ಲ ಕ್ರಮ ಕೈಕೊಂಡಿದ್ದಾರೆ ಎಂದು ಮಾಹಿತಿ ಪಡೆದುಕೊಂಡಿದ್ದು, ಪ್ರಕರಣದ ಕುರಿತಾಗಿ ಮತ್ತೆ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಉಳಿದ ಇಬ್ಬರಿಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.ಪ್ರಕರಣದ ತನಿಖಾಧಿಕಾರಿ ಎಸಿಪಿ ಗಿರೀಶ್ ಅವರನ್ನು ಕರೆಸಿಕೊಂಡು ಘಟನೆ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದಾರೆ.