Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಬಾವ ಮಹದೇವಯ್ಯ ಮೃತದೇಹ ಪತ್ತೆ..!

ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಬಾವ ಮಹದೇವಯ್ಯ ಅವರ ಮೃತದೇಹ ರಾಮಾಪುರದಲ್ಲಿ ಪತ್ತೆಯಾಗಿದೆ. ಮಹದೇವಯ್ಯ ಪುತ್ರ ಪ್ರಶಾಂತ್ ದೂರಿನ ಅನ್ವಯ ಪ್ರಕರಣ ದಾಖಲು ಮಾಡಿಕೊಂಡು ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ದುಷ್ಕರ್ಮಿಗಳು ಹತ್ಯೆ ಮಾಡಿ ರಾಮಾಪುರದಿಂದ ಮುಂಭಾಗದಲ್ಲಿರುವ ಅರಣ್ಯ ಪ್ರದೇಶದಲ್ಲಿ ಸುಮಾರು 50 ಅಡಿ ಎತ್ತರದಿಂದ ಕೆಳಕ್ಕೆ ಎಸೆದು ಕಲ್ಲಿನಿಂದ ಚಚ್ಚಿ ಮುಖವನ್ನು ಬಟ್ಟೆಯಿಂದ ಮುಚ್ಚಿದ್ದರು ಎನ್ನಲಾಗಿದೆ. ನ.2ರಂದೇ ಮಹದೇವಯ್ಯ ಕೊಲೆಯಾಗಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಅವರ ಸೋದರ ಸಿಪಿ ರಾಜೇಶ್ ಹಾಗೂ ಇನ್ನಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ಕಾರಣ ನಿಗೂಢವಾಗಿದ್ದು, ಪೊಲೀಸರ ತನಿಖೆಯಿಂದಷ್ಟೇ ಹತ್ಯೆಗೆ ಕಾರಣ ತಿಳಿದು ಬರಬೇಕಿದೆ.