Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮುಂದಿನ ಚುನಾವಣೆಯಲ್ಲೂ ನಾನೇ ಗೆಲ್ಲುತ್ತೇನೆ ಎಂದ ನರೇಂದ್ರ ಮೋದಿ

ನವದೆಹಲಿ: ಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಗೆದ್ದು ಬರಲಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಹತ್ವಾಕಾಂಕ್ಷಿ ಜಿಲ್ಲೆ ಯೋಜನೆಯ ಭಾಗವಾಗಿ 100 ಮಹತ್ವಾಕಾಂಕ್ಷಿ ವಲಯಗಳ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಜಾರಿಗೆ ತರಲಾದ ಮಹಾತ್ವಾಕಾಂಕ್ಷಿ ಜಿಲ್ಲಾ ಯೋಜನೆಗಳು ಸ್ಪೂರ್ತಿದಾಯಕವಾಗಿ ಹೊರಹೊಮ್ಮಿವೆ. ಮುಂದಿನ ವರ್ಷ ಅಕ್ಟೋಬರ್ -ನವೆಂಬರ್‌ನಲ್ಲಿ ಮಹತ್ವಾಕಾಂಕ್ಷಿ ವಲಯಗಳ ಪ್ರಗತಿ ಪರಿಶೀಲನೆ ನಡೆಸುತ್ತೇನೆ ಎಂದು ಮೋದಿ ತಿಳಿಸಿದ್ದಾರೆ. ಈ ಮೂಲಕ 2024ರಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಸಂದೇಶವನ್ನು ಪ್ರಧಾನಿ ಮೋದಿ ರವಾನಿಸಿದ್ದಾರೆ. 2024ರ ಅಕ್ಟೋಬರ್ ನವೆಂಬರ್ ನಲ್ಲಿ ನಾವು ಯೋಜನೆಯ ಮೌಲ್ಯ ಮಾಪನ ಮಾಡಲು ಇಲ್ಲಿ ಸೇರುತ್ತೇವೆ ಎಂಬ ಭರವಸೆ ನನಗಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.