Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ನಿತೀಶ್ ಕುಮಾರ್

ಪಾಟ್ನಾ:ಕಳೆದೆರಡು ದಿನಗಳಿಂದ ಬಿಹಾರ ರಾಜಕೀಯ ಬೆಳವಣಿಗೆ ಸಂಚಾಲವನ್ನು ಮೂಡಿಸಿತ್ತು.ಇದೀಗ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಜೆಡಿಯು ಮತ್ತು ಬಿಜೆಪಿ ಮೈತ್ರಿ ಅಧಿಕೃತವಾಗಿದೆ. ಅಲ್ಲದೇ ಬಿಹಾರದಲ್ಲಿ ಜೆಡಿಯು- ಆರ್ ಜೆಡಿ ನಡುವೆ ಇದ್ದ ಮೈತ್ರಿ ಮುರಿದು ಬಿದ್ದಿದೆ.

ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿದ ನಿತೀಶ್ ಕುಮಾರ್ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.ಬಿಹಾರದಲ್ಲಿ ಈಗ ಆರ್ ಜೆಡಿ – ಜೆಡಿಯು ಸರ್ಕಾರ ಪತನವಾಗಿದ್ದು, ನೂತನ ಜೆಡಿಯು- ಬಿಜೆಪಿ ಸರ್ಕಾರ ರಚನೆಯಾಗಲಿದೆ. ಈ ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು ಇಂದು ಭಾನುವಾರ ಸಂಜೆಯಯೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಮುಂದಾಗಿದ್ದ ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಜೊತೆ ಮುಂಚೂಣಿಯಲ್ಲಿ ನಿಂತು ಇಂಡಿಯಾ ಮೈತ್ರಿಕೂಟ ರಚನೆಗೆ ಕಾರಣರಾಗಿದ್ದರು. ಆದರೆ ಇದೀಗ ಮತ್ತೆ ಬಿಜೆಪಿ ಜೊತೆ ನಿತೀಶ್ ಕುಮಾರ್ ಕೈಜೋಡಿಸಿದ್ದಾರೆ.