Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮುನಿಸು ಮರೆತು ಸಂಸದೆ ಸುಮಲತಾ ಅವರನ್ನ ಭೇಟಿಯಾ ದ ಹೆಚ್‌ಡಿಕೆ

ಬೆಂಗಳೂರು: ಮಂಡ್ಯದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ತಮ್ಮ ಕೊನೆಗೂ ಮುನಿಸು ಮರೆತು ಸಂಸದೆ ಸುಮಲತಾ ಅವರನ್ನ ಭೇಟಿಯಾಗಿದ್ದು, ಊಹಾ-ಪೋಹಗಳಿಗೆ ತೆರೆ ಎಳೆದಿದ್ದಾರೆ.

ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ಸುಮಲತಾರನ್ನ ಭೇಟಿಯಾಗಿದ್ದಾರೆ. ಇದೇ ವೇಳೆ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಅವರು ಪಕ್ಷೇತರ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಈ ವೇಳೆ ಕುಮಾರಸ್ವಾಮಿ ಹಾಗೂ ಸುಮಲತಾ ಅವರ ನಡುವೆ ಮಾತಿನ ಸಮರ ನಡೆದಿತ್ತು.

ಇದೀಗ ಬದಲಾದ ರಾಜಕೀಯ ಸಮರದಲ್ಲಿ ಸುಮಲತಾ ಅವರು ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬೆಂಬಲಿಸುವಂತೆ ಸುಮಲತಾರೊಂದಿಗೆ ಮಾತುಕತೆ ನಡೆಸಿದ್ದಾರೆ. ಇ ಶನಿವಾರವಷ್ಟೇ ಸಂಸದೆ ಸುಮಲತಾ ಅಂಬರೀಷ್‌ ಬೆಂಗಳೂರಿನ ನಿವಾಸದಲ್ಲಿ ತಮ್ಮ ಬೆಂಬಲಿಗರ ಸಭೆ ನಡೆಸಿದ್ದರು. ಸಭೆಯಲ್ಲಿ ಬೆಂಬಲಿಗರು ಪಕ್ಷೇತರವಾಗಿ ಮಂಡ್ಯದಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡಿದ್ದರು. ಇದಕ್ಕೆ ಸುಮಲತಾ ಅಂಬರೀಶ್ ನಾನು ನಿಮ್ಮ ಆಸೆಗೆ ವಿರುದ್ಧ ಹೋಗಲ್ಲ. ಯೋಚನೆ ಮಾಡಿ ಏ.3ರಂದು ಮಂಡ್ಯದಲ್ಲಿ ಸಭೆ ಮಾಡಿ ನನ್ನ ನಿರ್ಧಾರ ಹೇಳುತ್ತೇನೆ ಎಂದು ಹೇಳಿದ್ದರು.

ಇದರ ಬೆನ್ನಲ್ಲೇ ಕುಮಾರಸ್ವಾಮಿ ಅವರು ಸುಮಲತಾ ನಿವಾಸಕ್ಕೆ ತೆರಳಿ ತಮ್ಮ ಸ್ಪರ್ಧೆಗೆ ಬೆಂಬಲ ಕೋರುವಂತೆ ಮನವಿ ಮಾಡಿದ್ದಾರೆ