Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮೂರು ದಿನಗಳಿಂದ ಮಲ್ಲಿಕಾರ್ಜುನ ಖರ್ಗೆಗೆ Z+ ಸೆಕ್ಯೂರಿಟಿ

ನವದೆಹಲಿ: ಏಕಾಏಕಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಹೆಚ್ಚಿನ ಭದ್ರತೆ ನೀಡಲಾಗಿದ್ದು, ಮೂರು ದಿನದಿಂದ ಖರ್ಗೆಗೆ Z+ಸೆಕ್ಯುರಿಟಿ ನೀಡಲಾಗಿದೆ.

ಸ್ಟೇಟ್ ಸೆಕ್ಯುರಿಟಿ ಜೊತೆಗೆ ಸಿಆರ್ ಪಿಎಫ್ Z+ ಸಕ್ಯೂರಿಟಿ ಸಹ ನಿಯೋಜನೆ ಮಾಡಲಾಗಿದೆ. ಹೆಚ್ಚುವರಿಯಾಗಿ 8 ಜನ ಸಿಆರ್‌ಪಿಎಫ್ ಗನ್ ಮ್ಯಾನ್ ಗಳ ನಿಯೋಜಿಸಲಾಗಿದೆ.

ಇತ್ತೀಚೆಗೆ ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು, ಆ ಕಾರಣಕ್ಕೆ ಕಳೆದ ಮೂರು ದಿನದಿಂದ   ಹೆಚ್ಚಿನ ಭದ್ರತೆ ನೀಡಲಾಗಿದೆ. ಬೆಂಗಳೂರು ನಿವಾಸಕ್ಕೂ z+ ಸೆಕ್ಯುರಿಟಿ ನಿಯೋಜಿಸಲಾಗಿದೆ.