Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮೂರು ರಾಜ್ಯದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು – ಪ್ರಧಾನಿ ಮೋದಿ ಹರ್ಷ

ನವದೆಹಲಿ: ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ಮೂರರಲ್ಲಿ ಬಿಜೆಪಿಯ ಐತಿಹಾಸಿಕ ಗೆಲುವು ದಾಖಲಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.

ಡಿ. 3 ರಂದು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ವಿಜಯೋತ್ಸವ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಗೆಲುವಿನ ಮೂಲಕ ನಾವು ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧಿಸುವುದು ಹೇಗೆ ಎಂಬುದನ್ನು ನಾವು ತೋರಿಸಿ ಕೊಟ್ಟಿದ್ದೇವೆ. ‘ಅಭಿವೃದ್ಧಿ ಹೊಂದಿದ ಭಾರತ’ ಎಂಬ ಕರೆಗೆ ಈಗ ಜಯ ಸಿಕ್ಕಿದೆ ಎಂದರು. ಇನ್ನು 2047 ರಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ನೋಡಲು ಬಯಸುವ ಪ್ರತಿಯೊಬ್ಬ ನಾಗರಿಕನು ಈ ಗೆಲುವನ್ನು ಯಶಸ್ಸು ಎಂದು ಪರಿಗಣಿಸುತ್ತಾನೆ ಎಂದು ಸಂತಸ ಹಂಚಿಕೊಂಡರು.

ಇನ್ನು ಇದೇ ವೇಳೆ ತೆಲಂಗಾಣದ ಜನತೆಗೆ ಮತ್ತು ತೆಲಂಗಾಣದ ಬಿಜೆಪಿ ಕಾರ್ಯಕರ್ತರಿಗೆ ನಾನು ವಿಶೇಷ ಕೃತಜ್ಞತೆ ಸಲ್ಲಿಸುತ್ತೇನೆ. ಇಲ್ಲಿನ ಪ್ರತಿ ಚುನಾವಣೆಯಲ್ಲೂ ಬಿಜೆಪಿಯ ಗ್ರಾಫ್ ನಿರಂತರವಾಗಿ ಹೆಚ್ಚುತ್ತಲೇ ಇದೆ. ತೆಲಂಗಾಣ ಜನತೆಯ ಸೇವೆಯಲ್ಲಿ ಬಿಜೆಪಿ ಯಾವುದೇ ಕೊರತೆ ಮಾಡುವುದಿಲ್ಲ. ನಿಮಗೆ ಬಿಜೆಪಿ ನೀಡಿದ ಭರವಸೆಗಳನ್ನು 100 ಕ್ಕೆ 100 ಈಡೇರಿಸುತ್ತದೆ ಇದು ಮೋದಿಯ ಗ್ಯಾರಂಟಿ ಎಂದರು.