Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಷ್ಯಾದ ಸೇನೆಯಲ್ಲಿರುವ ಭಾರತೀಯರನ್ನು ಕರೆತರಲು ಪ್ರಯತ್ನ ನಡೆಯುತ್ತಿದೆ- ವಿದೇಶಾಂಗ ಸಚಿವಾಲಯ

ನವದೆಹಲಿ: ರಷ್ಯಾದ ಸೇನೆಯಲ್ಲಿ ಸಹ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ ಭಾರತೀಯರನ್ನು ಸೇವೆಯಿಂದ ಬಿಡುಗಡೆಗೊಳಿಸಲು ರಷ್ಯಾ ಜೊತೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಭಾರತ ಸರ್ಕಾರ ತಿಳಿದಿದೆ. ಅಲ್ಲದೇ ಉಕ್ರೇನಲ್ಲಿ ಸಂಘರ್ಷ ನಡೆಯುತ್ತಿರುವ ಸ್ಥಳದಿಂದ ದೂರ ಇರುವಂತೆ ಭಾರತೀಯರಿಗೆ ತಿಳಿಸಲಾಗಿದೆ.

ಯುದ್ಧ ನಡೆಯುತ್ತಿರುವ ಸ್ಥಳದಲ್ಲಿ ಕೆಲ ಭಾರತೀಯರು ರಷ್ಯಾ ಸೇನೆಯ ಸಹ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ವರದಿಗಳ ನಡುವೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀ ರ್ ಜೈಸ್ವಾಲ್ ಸ್ಪಷ್ಟನೆ ನೀ ಡಿದ್ದಾರೆ.

ಕೆಲ ಭಾರತೀಯರು ರಷ್ಯಾ ಸೇನೆಯ ಸಹ ಸಿಬ್ಬಂದಿಯಾಗಿ ಕೆಲಸದ ಒಪ್ಪಂದಕ್ಕೆ ಸಹಿ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ಈ ವೇಳೆ ಜೈಸ್ವಾಲ್ ಹೇಳಿದ್ದಾರೆ.

ರಷ್ಯಾ ಸೇನೆಯ ಸಹ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ ಭಾರತೀಯರ ಶೀಘ್ರ ಬಿಡುಗಡೆ ಸಂಬಂಧ ಮಾಸ್ಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಸಂಬಂಧಪಟ್ಟ ರಷ್ಯಾ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ.