Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ನೇಮಕಕ್ಕೆ ಹೈಕಮಾಂಡ್‌ ಮೇಲೆ ಒತ್ತಡ ಹಾಕುತ್ತೇನೆ’-ಯಡಿಯೂರಪ್ಪ

ಬೆಂಗಳೂರು:ವಿಪಕ್ಷ ನಾಯಕ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಳಂಬವಾಗಿದೆ, ಈ ನೇಮಕಾತಿಗಳನ್ನು ಕೂಡಲೇ ಮಾಡಲು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಲು ಎಲ್ಲ ಪ್ರಯತ್ನಗಳನ್ನು ಮಾಡುವುದಾಗಿ ಮಾಜಿ ಮುಖ್ಯಮಂತ್ರಿ, ಹಿರಿಯ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಪ್ರತಿಪಕ್ಷ ನಾಯಕರ ನೇಮಕದಲ್ಲಿ ವಿಳಂಬವಾಗಿದೆ, ಆದಷ್ಟು ಬೇಗ ನೇಮಕ ಮಾಡುವಂತೆ ಮನವಿ ಮಾಡಿದ್ದೇನೆ. ವಿಧಾನಸಭೆ ಅಧಿವೇಶನಕ್ಕೂ ಮುನ್ನ ನೇಮಕಾತಿ ಮಾಡುವಂತೆ ಒತ್ತಡ ಹೇರಲು ನಾನು ಎಲ್ಲ ಪ್ರಯತ್ನವನ್ನು ಮಾಡುತ್ತೇನೆ ಎಂದು ಹೇಳಿದರು.

ರಾಜ್ಯಾಧ್ಯಕ್ಷ ಯಾರೇ ಆಗಲಿ ಆದಷ್ಟು ಬೇಗ ನೇಮಕವಾಗಬೇಕು ಎಂಬುದು ನಮ್ಮ ಬೇಡಿಕೆ ಎಂದರು.