Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಮಮಂದಿರ ಉದ್ಘಾಟನೆ – ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗೃಹಸಚಿವರು ಸೂಚನೆ

ಬೆಂಗಳೂರು:  ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ರಾಜ್ಯದಿಂದ ಹೋಗುವ ಯಾವುದೇ ಭಕ್ತಾದಿಗಳಿಗೆ ತೊಂದರೆಯಾಗದಂತೆ ಎಚ್ಚರವಹಿಸಬೇಕು ಎಂದು ಎಲ್ಲಾ ಎಸ್‍ಪಿಗಳಿಗೂ ಗೃಹಸಚಿವ ಜಿ. ಪರಮೇಶ್ವರ್ ಸೂಚನೆ ನೀಡಿದ್ದಾರೆ.

ರಾಮ ಭಕ್ತರಿಗೆ ಯಾವುದೇ ತೊಂದರೆಯಾಗಬಾರದು, ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಹೀಗಾಗಿ ಕಟ್ಟೆಚ್ಚರ ವಹಿಸುವಂತೆ ಎಲ್ಲಾ ಎಸ್‍ಪಿಗಳಿಗೆ ಸೂಚನೆ ನೀಡಿದ್ದಾರೆ.

ಜನವರಿ 22 ರಂದು ಅಯೋಧ್ಯೆಯ ರಾಮಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ರಾಜ್ಯದಿಂದ ಸಾಕಷ್ಟು ಜನ ಹೋಗುತ್ತಾರೆ. ಅಯೋಧ್ಯೆಗೆ ಹೋಗುವ ವೇಳೆ ಹಾಗೂ ಕಾರ್ಯಕ್ರಮದ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಿ. ಎಲ್ಲರೂ ಅಲರ್ಟ್ ಆಗಿ ಇರಬೇಕು ಎಂದು ಸೂಚನೆ ನೀಡಿದ್ದಾರೆ.