Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಶಂಕಿತನ ಮತ್ತಷ್ಟು ಫೋಟೋಗಳನ್ನ ಬಿಡುಗಡೆಗೊಳಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿ 9 ದಿನಗಳಾಗಿವೆ. ಇನ್ನೂ ಸಹ ಆರೋಪಿಯ ಸುಳಿವು ಪತ್ತೆಯಾಗುತ್ತಿಲ್ಲ. ಪ್ರಕರಣದ ತನಿಖೆ ಆರಂಭಿಸಿರುವ ಎನ್ಐಎ ಅಧಿಕಾರಿಗಳು ಆರೋಪಿಯ ಜಾಡು ಹಿಡಿದು ಹೊರಟಿದ್ದಾರೆ.

ಈ ನಡುವೆ ಶಂಕಿತನ ಕೆಲ ಫೋಟೋಗಳನ್ನು ಎನ್ಐಎ ಬಿಡುಗಡೆಗೊಳಿಸಿದ್ದು, ಆರೋಪಿಯನ್ನು ಯಾರಾದರೂ ನೋಡಿದ್ದಲ್ಲಿ ಅಥವಾ ಆತನ ಬಗ್ಗೆ ಸುಳಿವಿದ್ದಲ್ಲಿ ಎನ್ಐಎದೊಂದಿಗೆ ಹಂಚಿಕೊಳ್ಳುವಂತೆ ಕೋರಿದ್ದಾರೆ. ಇಂದು ಸಹ ಎನ್ಐಎ ಅಧಿಕಾರಿಗಳು ಆರೋಪಿಯ ಕೆಲ ಫೋಟೋಗಳನ್ನ ಬಿಡುಗಡೆಗೊಳಿಸಿದ್ದು, ಆರೋಪಿಯ ಕುರಿತು ಯಾವುದೇ ಸುಳಿವಿದ್ದಲ್ಲಿ ಕೆಳಕಂಡ ಸಂಪರ್ಕ ಸಂಖ್ಯೆ ಅಥವಾ ಮೇಲ್ ಐಡಿಯನ್ನ ಸಂಪರ್ಕಿಸುವಂತೆ ಕೋರಿದ್ದಾರೆ. ಸಂಪರ್ಕಿಸಬೇಕಿರುವ ವಿವರ Tel :- 080-29510900, 8904241100, Mail: info.blr.nia.gov.in