Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಸಾಯನಿಕ ಗೋಡೌನ್‍ನಲ್ಲಿ ಅಗ್ನಿ ಆಕಸ್ಮಿಕ– 6 ಮಂದಿ ಸಜೀವ ದಹನ

ಹೈದರಾಬಾದ್: ರಾಸಾಯನಿಕ ಸಂಗ್ರಹಿಸಿದ್ದ ಗೋಡೌನ್‌ಗೆ ಸಂಭವಿಸಿದ ಬಾರೀ ಅಗ್ನಿ ಅವಘಡದಿಂದ ಆರು ಮಂದಿ ಸಜೀವ ದಹನವಾದ ಘಟನೆ ತೆಲಂಗಾಣದ ನಾಂಪಲ್ಲಿಯಲ್ಲಿ ಸಂಭವಿಸಿದೆ.

ನಾಲ್ಕು ಅಂತಸ್ತಿನ ಕಟ್ಟಡದ ಮೊದಲನೇ ಮಹಡಿಯಲ್ಲಿ ರಾಸಾಯನಿಕಗಳನ್ನು ಸಂಗ್ರಹಿಸಲಾಗಿತ್ತು. ಅದೇ ಕಟ್ಟಡದ ನೆಲ ಮಾಳಿಗೆಯಲ್ಲಿ ಕಾರನ್ನು ರಿಪೇರಿ ಮಾಡಲಾಗುತ್ತಿತ್ತು. ಈ ವೇಳೆ ಕಿಡಿಗಳಿಂದ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನ ನಂದಿಸುಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಗೋಡನ್‌ನಲ್ಲಿ ಯಾವ ರಾಸಾಯನಿಕಗಳನ್ನುಸಂಗ್ರಹಿಸಲಾಗಿತ್ತು ಎಂಬುದರ ಕುರಿತು ಮಾಹಿತಿ ಸಿಕ್ಕಿಲ್ಲ. ಇದೀಗ ಘಟನೆಗೆ ಸಂಬಂಧ ಪಟ್ಟಂತೆ ತನಿಖೆ ನಡೆಸಲಾಗುತ್ತಿದೆ ಎಂದು ಹೈದರಾಬಾದ್‍ನ ಕೇಂದ್ರ ವಲಯದಿಂದ ಮಾಹಿತಿ ನೀಡಿದ್ದಾರೆ ತಿಳಿಸಿದ್ದಾರೆ