Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಾಮಾಚಾರಕ್ಕಾಗಿ ಸಮಾಧಿ ಅಗೆದು ಮಗುವಿನ ಶವ ಹೊರತೆಗೆದ ದುಷ್ಕರ್ಮಿಗಳು – ದೂರು ದಾಖಲು

ಕೋಲಾರ: 20 ದಿನಗಳ ಹಿಂದೆ ಕೋಲಾರ ಪಟ್ಟಣದಲ್ಲಿ ಮೂರೂವರೆ ವರ್ಷದ ಮಗು ಆಯೇಷಾ ಅಂಜುಂ ಜೊತೆ ತಾಯಿ ಹಮೀದಾ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದರು. ನ.19 ರಂದು ಯಾರೋ ದುಷ್ಕರ್ಮಿಗಳು ವಾಮಾಚಾರಕ್ಕಾಗಿ ಮಗು ಆಯೇಷಾ ಅಂಜುಂ ಶವ ಹೊರತೆಗೆದು ಅದರ ಬಟ್ಟೆ, ಕೂದಲು ತೆಗೆದುಕೊಂಡಿರುವ ಆರೋಪ ಕೇಳಿಬಂದಿದೆ.

ವರದಕ್ಷಿಣೆ ಕಿರುಕುಳ ತಾಳಲಾರದೆ ಮಗು ಆಯೇಷಾ ಅಂಜುಂ ಜೊತೆ ತಾಯಿ ಹಮೀದಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತಿ ಶೋಯಬ್ ವಿರುದ್ಧ ಹಮೀದಾ ಪೋಷಕರು ಆರೋಪ ಮಾಡಿದ್ದರು. ಇದೀಗ ಪತಿ ಶೋಯಬ್ ಸೂಚನೆಯಂತೆ ಶ್ರೀರಾಮ ಮತ್ತು ನಾರಾಯಣಸ್ವಾಮಿ ಎಂಬುವರು ಮೃತ ಆಯೇಷಾ ಅಂಜುಂ ಶವ ಹೊರತೆಗೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ನ.19ರ ಬೆಳಗ್ಗೆ ಇಬ್ಬರು ಸ್ಮಶಾನಕ್ಕೆ ತೆರಳಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಮ್ಮ ಧಾರ್ಮಿಕ ಭಾವನಕ್ಕೆ ಧಕ್ಕೆಯುಂಟಾಗಿದೆ ಎಂದು ಹಮೀದಾ ಪೋಷಕರು ಶ್ರೀನಿವಾಸಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.