Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಿಶ್ವ ಚೆಸ್‌ ಪಂದ್ಯದಲ್ಲಿ ಭಾರತದ ಆರ್‌. ಪ್ರಜ್ಞಾನಂದಗೆ ಸೋಲು – ವಿಶ್ವಕಪ್ ಗೆದ್ದ ಕಾರ್ಲ್ಸನ್‌

ಬಾಕು: ವಿಶ್ವ ಚೆಸ್‌ ಪಂದ್ಯಾವಳಿಯ ಗುರುವಾರ ನಡೆದ ಫೈನಲ್ ಟೈ ಬ್ರೇಕರ್‌ ಸ್ಪರ್ಧೆಯಲ್ಲಿ ಭಾರತದ ಆರ್‌. ಪ್ರಜ್ಞಾನಂದ ಎರಡೂ ಸುತ್ತಿನಲ್ಲೂ ಸೋಲು ಅನುಭವಿಸಿದ್ದು, ಮ್ಯಾಗ್ನಸ್‌ ಕಾರ್ಲ್ಸನ್‌ ವಿಶ್ವ ಕಪ್ ಗೆದ್ದಿದ್ದಾರೆ.

ಟೈ ಬ್ರೇಕರ್‌ನಲ್ಲಿ ಇಬ್ಬರೂ ತಲಾ 10 ನಿಮಿಷಗಳ 2 ರ‍್ಯಾಪಿಡ್ ಗೇಮ್‌ಗಳನ್ನು ಆಡಿದ್ದು, ಎರಡರಲ್ಲೂ ಭಾರಿ ನಿರೀಕ್ಷೆ ಹುಟ್ಟು ಹಾಕಿದ್ದ ಭರವಸೆಯ ಪ್ರತಿಭೆ ಪ್ರಜ್ಞಾನಂದ ನಾರ್ವೇ ಚೆಸ್ ಮಾಸ್ಟರ್ ಎದುರು ಸೋತಿದ್ದಾರೆ.

ಇನ್ನು ಮಂಗಳವಾರ ನಡೆದ ಮೊದಲ ಸುತ್ತು, ಬುಧವಾರದ ದ್ವಿತೀಯ ಸುತ್ತಿನ ಫೈನಲ್‌ ಪಂದ್ಯ ಕೂಡ ಡ್ರಾಗೊಂಡಿತ್ತು. ಇದರೊಂದಿಗೆ ಎರಡೂ ಕ್ಲಾಸಿಕಲ್‌ ಗೇಮ್‌ಗಳಲ್ಲಿ ಫ‌ಲಿತಾಂಶ ದಾಖಲಾಗಿರಲಿಲ್ಲ.