Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

-ಶಿವಲೆಂಕ ಮಂಚಣ್ಣ ಅವರ ವಚನ ……

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಸುಖದುಃಖಾದಿಗಳ ಮೀರುವ ಎನ್ನವರ ಕಾಣೆ.

ಸುಖದುಃಖಾದಿಗಳ ಮೀರುವ ನಿನ್ನವರ ಕಾಣೆ.

ಇನ್ನೇನು ಹೇಳುವೆ ? ನಡುಹೊಳೆಯಲ್ಲಿ ಹರುಗೋಲ ಹರಿದಂತೆ,

ಅಂಬಿಗನ ಕೊರಳ ಸುತ್ತಿ ಬಂದವರೆಲ್ಲರೂ

ಉಭಯವು ಹೊಂದಿದಂತಾಯಿತ್ತು.

ನೀ ಎನ್ನ ಬಟ್ಟೆ, ನಾ ನಿನ್ನ ಬಟ್ಟೆ.

ಉಭಯವು ಬಂದ ಬಟ್ಟೆಯಾದೆವಲ್ಲ.ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವೆ.

 

-ಶಿವಲೆಂಕ ಮಂಚಣ್ಣ