Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸರ್ಕಾರದಿಂದ ಗೃಹ ಲಕ್ಷ್ಮೀಯರಿಗೆ ಬ್ರೇಕಿಂಗ್ ಅಪ್ಡೇಟ್.!! ಮಹತ್ವದ ಯೋಜನೆ ಜಾರಿ

ಗೃಹಲಕ್ಷ್ಮಿ ಯೋಜನೆ: ರಾಜ್ಯ ಸರ್ಕಾರದಿಂದ ‘ಗೃಹಲಕ್ಷ್ಮಿ’ಯರಿಗೆ ಭರ್ಜರಿ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಕೇರಳ ಮಾದರಿಯ ಹೊಸ ಚಿಟ್ ಫಂಡ್ ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳಿಗೆ 2 ಸಾವಿರ ನೀಡುತ್ತಿರುವ ಸರ್ಕಾರ ಅದೇ ದುಡ್ಡನ್ನು ಚಿಟ್ ಫಂಡ್ ನಲ್ಲಿ ಹೂಡಿಕೆ ಮಾಡುವ ಯೋಜನೆಗೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಮಹಿಳೆಯರನ್ನು ಚಿಟ್ ಫಂಡ್ ನಲ್ಲಿ ತೊಡಗಿಸಲು ಉತ್ತೇಜನ ನೀಡಿ ಉಳಿತಾಯ ಮಾಡುವತ್ತ ಗಮನ ಸೆಳೆಯುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ.

ಕೇರಳ ಮಾದರಿಯ ನಯಾ ಚಿಟ್ ಫಂಡ್ ನನ್ನು ಜಾರಿ ಮಾಡಲು ಸರ್ಕಾರ ಸಿದ್ದತೆ ನಡೆಸಿದ್ದು, ಈ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎನ್ನಲಾಗಿದೆ. ಗ್ರಾಮೀಣ ಭಾಗದಲ್ಲಿರುವ ಸ್ವಸಹಾಯ ಸಂಘಗಳ ಮೂಲಕ ಚಿಟ್ ಫಂಡ್ ಉದ್ಯಮ ಬಲಪಡಿಸುವ ಗುರಿಯನ್ನು ಸಾಧಿಸುವ ಯೋಜನೆ ರೂಪಿಸಲಾಗಿದೆ. ನೀವು ಇನ್ನೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿಲ್ಲ ಎಂದರೆ ಇಂದೇ ಅರ್ಜಿ ಸಲ್ಲಿಸಿ ಮತ್ತು ಪ್ರತಿ ತಿಂಗಳು 2000 ರೂಪಾಯಿಯನ್ನು ಪಡೆದುಕೊಳ್ಳಿ.