Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸಿಎಂ ಭೇಟಿಯಾದ ಜನಾರ್ದನ ರೆಡ್ಡಿ- ರಾಜಕೀಯದಲ್ಲಿ ಕುತೂಹಲ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ನಡೆಯಲಿರುವ ಚುನಾವಣೆ ರಂಗೇರಿದೆ. ಇದರ ಬೆನ್ನಲೇ , ಕೆಆರ್‌ಪಿಪಿ ಶಾಸಕ ಜನಾರ್ದನ ರೆಡ್ಡಿಯವರು ದಿಢೀರ್ ಆಗಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಚುನಾವಣೆ ಹೊತ್ತಿನಲ್ಲಿ ಜನಾರ್ದನ ರೆಡ್ಡಿಯವರು ಭೇಟಿ ರಾಜಕೀಯ ವಲಯದಲ್ಲಿ ಕುತೂಹಲವನ್ನು ಉಂಟು ಮಾಡಿದೆ.

ಇಂದುಬೆಳಗ್ಗೆ ಕಾವೇರಿ ನಿವಾಸಕ್ಕೆ ಜನಾರ್ದನ ರೆಡ್ಡಿಯರು ತೆರಳಿದ್ದು, ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್‍ಗೆ ಬೆಂಬಲ ಕೊಡುವ ಸಾಧ್ಯತೆ ಇದೆ ಎನ್ನಲಾಗುತ್ತದೆ.ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಭೇಟಿ ವೇಳೆ ಡಿಸಿಎಂ ಡಿಕೆಶಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಉಪಸ್ಥಿತರಿದ್ದರು.

ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, , ನಾನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದೇನೆ. ಆನೆಗುಂದಿ ಉತ್ಸವಕ್ಕೆ ಆಹ್ವಾನ ನೀಡಲು ತೆರಳಿದ್ದೆ.ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಯಾರಿಗೆ ಮತ ಹಾಕಬೇಕು ಎಂಬ ಬಗ್ಗೆ ಇನ್ನು ತೀರ್ಮಾನ ಮಾಡಿಲ್ಲ ಎಂಬ ಹೇಳಿಕೆ ನೀಡುವ ಮೂಲಕ ನಡೆ ಕುತೂಹಲ ಮೂಡಿಸಿದೆ.