Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸೇತುವೆಯಿಂದ ಕೆಳಗೆ ಬಿದ್ದ ಬಸ್; 5 ಸಾವು, 40ಕ್ಕೂ ಅಧಿಕ ಮಂದಿಗೆ ಗಾಯ

ಪುರಿ: ಬಸ್ಸೊಂದು ಸೇತುವೆಯಿಂದ ಕೆಳಗುರುಳಿದ ಪರಿಣಾಮ ಐವರು ಸಾವನ್ನಪ್ಪಿ, 40ಕ್ಕೂ ಅಧಿಕ ಮಂದಿಗೆ ಗಾಯವಾದ ಘಟನೆ ಒಡಿಶಾದ ಜಾಜ್ ಪುರ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಕೋಲ್ಕತ್ತಾಗೆ ತೆರಳುತ್ತಿದ್ದ ಬಸ್ ಬಾರಾಬತಿ ಸೇತುವೆ ಮೇಲಿನಿಂದ ಕೆಳಗೆ ಬಿದ್ದಿದೆ. ಘಟನಾ ಸ್ಥಳಕ್ಕೆ ಜಜ್ ಪುರದ ಪೊಲೀಸ್ ಅಧೀಕ್ಷಕರು, ವೈದ್ಯರ ತಂಡ ಮತ್ತು ಇತರ ಜಿಲ್ಲಾಡಳಿತ ಅಧಿಕಾರಿಗಳು ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರನ್ನು ಅಗ್ನಿಶಾಮಕ ಸಿಬ್ಬಂದಿ ಗ್ಯಾಸ್ ಕಟರ್ ಬಳಸಿ ರಕ್ಷಣೆ ಮಾಡಿದ್ದಾರೆ.

ಇನ್ನು ಅಪಘಾತದಲ್ಲಿ ಮೃತಪಟ್ಟವರ ಕುರಿತು ಸಿಎಂ ನವೀನ್‌ ಪಟ್ನಾಯಕ್‌ ಸಂತಾಪ ಸೂಚಿಸಿದ್ದಾರೆ. ಹಾಗೂ ಮೃತಪಟ್ಟವರ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.