Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

–ಹಡಪದ ಅಪ್ಪಣ್ಣ ಅವರ ವಚನ ……

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ರಾಗ ರಚನೆಯ ಬಲ್ಲೆನೆಂಬ ವ್ಯಂಗಿಮನುಜರಿರಾ, ನೀವು ಕೇಳಿ :

ರಾಗವಾವುದು, ರಚನೆಯಾವುದು ಬಲ್ಲರೆ ನೀವು ಹೇಳಿರೊ,

ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ.

ಈ ರಾಗದ್ವೇಷವ ಹಿಡಿದು, ಕೂಗಿಡುವುದೆಲ್ಲವು ರಾಗವೆ?

ವೇದಪುರಾಣಾಗಮಶಾಸ್ತ್ರವನೋದಿ ಕಂಡವರ ಬೋಧಿಸುವದೆಲ್ಲ ರಚನೆಯೆ? ಅಲ್ಲ.

ಇನ್ನು ರಾಗವಾವುದು ಎಂದರೆ,

ಝೇಂಕಾರದ ಪ್ರಣಮದ ನಾದವನರಿಯಬಲ್ಲರೆ ರಾಗ.

ಇನ್ನು ರಚನೆ ಯಾವುದು ಎಂದರೆ,

ಯೋಗಿ, ಜೋಗಿ, ಶ್ರವಣ, ಸನ್ಯಾಸಿ, ಕಾಳಾಮುಖಿ, ಪಾಶುಪತ ಷಡುದರ್ಶನಕ್ಕೆ

ಶ್ರುತವ ತೋರಿ ನುಡಿದು, ದೃಷ್ಟವ ತೋರಿ ನಡೆದು,

ಅಲ್ಲದಿರ್ದರೆ ನೀತಿಯ ತೋರಿ ಮರೆವುದೀಗ ರಚನೆ.

ಇದನರಿಯದೆ ನಾನು ರಾಗ ರಚನೆಯ ಬಲ್ಲೆನೆಂದು ನುಡಿವ

ಮೂಗುಹೋದ ಮೂಕೊರೆಯರ ಮೆಚ್ಚುವನೆ,ನಮ್ಮ ಬಸಪ್ರಿಯ ಕೂಡಲಚೆನ್ನಬಸವಣ್ಣ ?

 

-ಹಡಪದ ಅಪ್ಪಣ್ಣ