Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

28 ರಂದು  ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ

 

     ದಾವಣಗೆರೆ;ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್ ಮತ್ತು ಡಿಎಆರ್) 3064 ಹುದ್ದೆಗಳ ಭರ್ತಿಗೆ ಜನವರಿ 28 ರಂದು ಬೆಳಿಗ್ಗೆ 11 ಗಂಟೆಯಿಂದ ಮ.12ರವರೆಗೆ ದಾವಣಗೆರೆ ನಗರದ 40 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.

ಈ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಪ್ರವೇಶಪತ್ರದ ಮಾಹಿತಿಯನ್ನು ಬೆಂಗಳೂರಿನ ನೇಮಕಾತಿ ಕಚೇರಿಯಿಂದ ಎಸ್.ಎಂ.ಎಸ್ ಮೂಲಕ ಮಾಹಿತಿಯನ್ನು ನೀಡಲಾಗುತ್ತದೆ ಮತ್ತು ಪ್ರವೇಶ ಪತ್ರದ ಲಿಂಕ್ ಬಳಸಿ ಡೌನ್ ಲೋಡ್ ಮಾಡಿ ಪ್ರತಿಯೊಂದಿಗೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕೆಂದು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದ್ದಾರೆ.