Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಭಯೋತ್ಪಾದಕರ ಬಂಧನ

ಶ್ರೀನಗರ: ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಭಯೋತ್ಪಾದಕರನ್ನು ವಿಶೇಷ ತನಿಖಾ ಸಂಸ್ಥೆ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.

ಬಂಧಿತ ಉಗ್ರರನ್ನು ಫಿರ್ದೌಸ್ ಅಹ್ಮದ್ ವಾನಿ ಮತ್ತು ಖುರ್ಷಿದ್ ಅಹ್ಮದ್ ಮಲಿಕ್ ಎಂದು ಗುರುತಿಸಲಾಗಿದೆ.

ಇಬ್ಬರೂ ಘಾಟ್ ಮತ್ತು ಭಾರತ್ ಗ್ರಾಮದವರು ಎನ್ನಲಾಗಿದ್ದು, ಇವರಿಬ್ಬರು ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದರು ಎಂದು ವರದಿಯಾಗಿದೆ.

ಇನ್ನು 1990 ರ ದಶಕದಲ್ಲಿ ತಮ್ಮ ತವರು ಜಿಲ್ಲೆಯಲ್ಲಿ ಉಗ್ರಗಾಮಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಕಳೆದ ಹಲವು ದಶಕಗಳಿಂದ ಇವರು ಸ್ಥಳೀಯ ಪೊಲೀಸರಿಗೆ ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯಲ್ಲಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.