Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘370ನೇ ವಿಧಿ ರದ್ದತಿಗೆ ನಮ್ಮ ವಿರೋಧ ಸರಿಯಾಗಿಯೇ ಇದೆ’ – ಅಧೀರ್ ರಂಜನ್ ಚೌಧರಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕರು ಇನ್ನೂ ತಮ್ಮ ಪ್ರಾಣವನ್ನು ತ್ಯಾಗ ಮಾಡುತ್ತಿದ್ದಾರೆ. ವಿಧಿ 370ರ ರದ್ದತಿಗೆ ನಮ್ಮ ವಿರೋಧ ಸರಿಯಾಗಿದೆಂದು ಸಾಬೀತುಪಡಿಸುತ್ತದೆ ಎಂದು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಒಂದು ಕಡೆ ಜಮ್ಮು ಹಾಗೂ ಕಾಶ್ಮೀರ ಹಾಗೂ ಮತ್ತೊಂದೆಡೆ, ಮಣಿಪುರ ಹೊತ್ತಿ ಉರಿಯುತ್ತಿದ್ದು, ಇದು ದೇಶದ ಭದ್ರತಾ ಪರಿಸ್ಥಿತಿಗೆ ಬಂದಾಗ ಇನ್ನಷ್ಟು ಹೆಚ್ಚು ಕೆಲಸ ಮಾಡಬೇಕಾಗಿದೆ ಎಂಬುದನ್ನು ಸೂಚಿಸುತ್ತದೆ ಎಂದರು.

ಇನ್ನು ಈ ಹಿಂದೆ, ಸೈನಿಕರು ಕರ್ತವ್ಯದಲ್ಲಿದ್ದಾಗ ಪ್ರಾಣ ಕಳೆದುಕೊಂಡ ಸಂದರ್ಭದಲ್ಲಿ ನಾವು ಮೌನ ಪ್ರಾರ್ಥನೆಯನ್ನು ಆಚರಿಸಿದ್ದೇವೆ, ಆದರೆ ಈಗ ಅದು ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.