Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘6 ದಿನಗಳ ಕಾಲ ಇಡಿ ವಶಕ್ಕೆ- ಅಗತ್ಯವಿದ್ದರೆ, ಜೈಲಿನಿಂದಲೇ ಸರ್ಕಾರ ನಡೆಸುತ್ತೇನೆ’- ಕೇಜ್ರಿವಾಲ್

ಹೊಸದಿಲ್ಲಿ: ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಅರವಿಂದ್ ಕೇಜ್ರಿವಾಲ್ ಅವರನ್ನು ಇಂದು ಜಿಲ್ಲಾ ನ್ಯಾಯಾಲಯ 6 ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ.

ರೋಸ್ ಅವೆನ್ಯೂ ನ್ಯಾಯಾಲಯವು ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿದ ಕೂಡಲೇ ರಾಷ್ಟ್ರೀಯ ಮಾಧ್ಯಮದೊಂದಿಗೆ ಮಾತನಾಡಿದ ಕೇಜ್ರಿವಾಲ್ ನಾನು ದೆಹಲಿಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ, ಅಗತ್ಯವಿದ್ದರೆ, ನಾನು ಸರಕಾರವನ್ನು ಜೈಲಿನಿಂದಲೇ ನಡೆಸುತ್ತೇನೆ ಎಂದು ಹೇಳಿದ್ದಾರೆ.

ನ್ಯಾಯಾಲಯದಲ್ಲಿ ಮೂರು ಗಂಟೆಗಳ ಸುದೀರ್ಘ ವಿಚಾರಣೆಯ ನಂತರ, ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಕೇಜ್ರಿವಾಲ್ ಅವರನ್ನು ಅವರ ಅಧಿಕೃತ ನಿವಾಸದಿಂದ ತನಿಖಾ ಸಂಸ್ಥೆ ಬಂಧಿಸಿದ ಒಂದು ದಿನದ ನಂತರ ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಕಳುಹಿಸಿದ್ದಾರೆ.