Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಜಾತಿಗಣತಿ ವರದಿ ಜನವರಿಯಲ್ಲಿ ಸ್ವೀಕಾರ’ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿಗಣತಿ ವರದಿಯನ್ನು ನಮ್ಮ ಸರ್ಕಾರ ಜನವರಿಯಲ್ಲಿ ಸ್ವೀಕಾರ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ ಎಂದರು.

ಇನ್ನು ಜಾತಿ ಗಣತಿ ವರದಿ ನಾನು ಇದ್ದಾಗ ಬಂದಿರಲಿಲ್ಲ. ನಾನು ಹೋದ ಮೇಲೆ ಯಡಿಯೂರಪ್ಪ, ಕುಮಾರಸ್ವಾಮಿ, ಬೊಮ್ಮಾಯಿ ಬಂದರೂ ಅವರು ವರದಿ ಬಿಡುಗಡೆ ಮಾಡಿಲ್ಲ. ಕುಮಾರಸ್ವಾಮಿ ಸಮಯದಲ್ಲಿ ವರದಿ ರೆಡಿ ಆಗಿದೆ. ಅಂದಿನ ಸಚಿವ ಪುಟ್ಟರಂಗ ಶೆಟ್ಟಿ ವರದಿ ತೆಗೆದುಕೊಳ್ಳೋಕೆ ರೆಡಿ ಇದ್ದರು. ಆದರೆ ಕುಮಾರಸ್ವಾಮಿ ವರದಿ ತೆಗೆದುಕೊಳ್ಳಬೇಡ ಎಂದು ಹೆದರಿಸಿದರು. ಅದಕ್ಕೆ ಪುಟ್ಟರಂಗಶೆಟ್ಟಿ ವರದಿ ಪಡೆಯಲಿಲ್ಲ ಎಂದು ಸಿಎಂ ಆರೋಪಿಸಿದ್ದಾರೆ.