Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಾಲ್‌ ನಲ್ಲಿ ಮಹಿಳೆ ಜೊತೆ ಅನುಚಿತ ವರ್ತನೆ – ಆರೋಪಿ ಗುರುತು ಪತ್ತೆ

ಬೆಂಗಳೂರು :ಮಾಲ್‌ ನಲ್ಲಿ ಮಹಿಳೆಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿದ್ಧ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ದೃಶ್ಯ ಆಧರಿಸಿ ಪೊಲೀಸರು ಆರೋಪಿಯ ಗುರುತು ಪತ್ತೆ ಹಚ್ಚುವಲ್ಲಿ ಯಾಶಸ್ವಿಯಾಗಿದ್ದಾರೆ.

ಆರೋಪಿ ಬಸವೇಶ್ವರನಗರದ ನಿವಾಸಿ ಅಶ್ವರ್ಥ ನಾರಾಯಣ್ (60) ಎಂದು ಗುರುತಿಸಲಾಗಿದೆ.ಆದರೆ ಆತ ತನ್ನ ನಿವಾಸದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಈತ ಕಳೆದ ಮೂರು ದಿನಗಳ ಹಿಂದೆ ಮಹಿಳೆಯೊಬ್ಬರು ಜೊತೆ ಅಸಭ್ಯವಾಗಿ ವರ್ತಿಸಿದ್ದ, ಈ ವೇಳೆ ಯಶವಂತ್ ಎಂಬವರು ಇದರ ವಿಡಿಯೋ ಚಿತ್ರಿಕರಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದ್ದು ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಲಾಯಿತು. ಇನ್ನು ಈ ವಿಡಿಯೋ ವೈರಲ್ ಆಗ್ತಾ ಇದ್ದಂತೆ ಮ್ಯಾನೇಜರ್‍ ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.
ಆರೋಪಿಯು ಈ ಹಿಂದೆ ಪ್ರತಿಷ್ಠಿತ ಮಠಕ್ಕೆ ಸೇರಿದ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ಕಾರ್ಯನಿರ್ವಹಿಸಿದ್ದು, ಕಳೆದ ಎಂಟು ತಿಂಗಳ ಹಿಂದೆಯಷ್ಟೇ ನಿವೃತ್ತನಾಗಿದ್ದ ಎನ್ನಲಾಗಿದೆ.
ಸದ್ಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಆರೋಪಿ ಮನೆಗೆ ಬೀಗ ಹಾಕಿಕೊಂಡು ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದೆ.