Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಎನ್ ಡಿಎಯಿಂದ ಆಚೆ ಬಂದ ಬಳಿಕ ಬೆಂಬಲದ ಬಗ್ಗೆ ಕುಮಾರಸ್ವಾಮಿ ಮಾತನಾಡಲಿ’ – ಡಿ.ಕೆಶಿ ತಿರುಗೇಟು

ಬೆಂಗಳೂರು:  ಎನ್ ಡಿಎ ಮೈತ್ರಿಕೂಟದವವರು ಕುಮಾರಸ್ವಾಮಿ ಅವರು. ನಮಗೂ ಎನ್ ಡಿಎಗೂ ಸಂಬಂಧವಿಲ್ಲ.

ಮೊದಲು ಎನ್ ಡಿಎಯಿಂದ ಆಚೆ ಬಂದು ನಂತರ ಬೆಂಬಲದ ಬಗ್ಗೆ ಮಾತನಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಶಿವಕುಮಾರ್ ಅವರು ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ 19 ಶಾಸಕರ ಬೆಂಬಲ ನೀಡುತ್ತೇವೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ಬೆಂಬಲ ನೀಡುವ ಕಾಲದಲ್ಲೇ ಬೆಂಬಲನೀಡಲಿಲ್ಲ. ಈಗೇನು ಬೆಂಬಲ ನೀಡುತ್ತಾರೆ ಎಂದು ಕಿಡಿಕಾರಿದರು.

ಕುಮಾರಸ್ವಾಮಿ ಅವರ ಮಾತು ಕೇಳಿ ಬಹಳ ಸಂತೋಷವಾಗಿದೆ. ಸದ್ಯ ನಮಗೆ ರಾಜ್ಯದ ಜನತೆ 136 ಸೀಟು ಜತೆ ಅಧಿಕಾರ ಕೊಟ್ಟಿದ್ದಾರೆ. ಅವರು ಉತ್ತಮ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ತಿದ್ದುವ ಕೆಲಸ ಮಾಡಲಿ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಹಾಗೂ ಬಿಜೆಪಿ ತಲಾ ಒಂದೊಂದು ಬಾರಿ ಅವರನ್ನು ಮುಖ್ಯಮಂತ್ರಿ ಮಾಡಿದೆ. ಅವರತಂದೆಯವರನ್ನು ಕಾಂಗ್ರೆಸ್ ಪ್ರಧಾನಮಂತ್ರಿ ಮಾಡಿದೆ. ಅವರಿಗಿರುವ ಅಪಾರ ಅನುಭವದ ಮೂಲಕ ನಮಗೆ ಮಾರ್ಗದರ್ಶನ ನೀಡಲಿ. ಅವರ ಪ್ರೀ ತಿ ವಿಶ್ವಾಸಕ್ಕೆ ನಮಸ್ಕಾರ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.