Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

4 ವರ್ಷದ ಮಗುವಿನ ಮೇಲೆ ಅತ್ಯಾಚಾರ- ಸಬ್ ಇನ್ಸ್ಪೆಕ್ಟ ರ್ ಪೊಲೀಸ್‌ ವಶ

ಜೈಪುರ : ನಾಲ್ಕು ವರ್ಷದ ಮಗುವಿನ ಮೇಲೆ ಪೊಲೀಸ್ ಸಬ್ ಇನ್ಸ್ಪೆಕ್ಟ ರ್ ಅತ್ಯಾಚಾರವೆಸಗಿರುವ ಅಮಾಯಕ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ಆರೋಪಿ ಸಬ್ ಇನ್ಸ್ಪೆಕ್ಟ ರ್ ಭೂಪೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಜಿಲ್ಲೆಯ ಲಾಲ್ಸೋ ಟ್ ಪ್ರದೇಶದಲ್ಲಿ ಈ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಆರೋಪಿ ಸಬ್ ಇನ್ಸ್ಪೆಕ್ಟ ರ್ ಮಧ್ಯಾಹ್ನ ನಾಲ್ಕು ವರ್ಷದ ಮಗುವನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾ ಚಾರವೆಸಗಿದ್ದಾನೆ ಎಂದು ಎಎಸ್ಪಿ ರಾಮಚಂದ್ರ ಸಿಂಗ್ ನೆಹ್ರಾ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಪಟ್ಟಂತೆ ಭೂಪೇಂದ್ರ ಸಿಂಗ್ ನನ್ನ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಪೊಲೀಸ್ ಅಧಿಕಾರಿ ನಡೆಸಿದ ಕೃತ್ಯ ದ ವಿರುದ್ಧ ಸ್ಥಳೀಯ ನಿವಾಸಿಗಳು ರಾಹುವಾಸ್ ಪೊಲೀಸ್ ಠಾಣೆ ಎದುರು ಜಮಾಯಿಸಿ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು. ಅಲ್ಲದೆ ಅತ್ಯಾಚಾರ ನಡೆಸಿರುವ ವಿಚಾರ ಬೆಳಕಿಗೆ ಬರುವಂತೆ ಊರಿನ ಜನ ಪೊಲೀಸ್ ಸಬ್ ಇನ್ಸ್ಪೆಕ್ಟ ರ್ ಮನ ಬಂದಂತೆ ಥಳಿಸಿ ಬಳಿಕ ಪೊಲೀಸರ ವಶಕ್ಕೆ ನೀಡಿದ್ದಾರೆ.

ಆರೋಪಿಯನ್ನು ಬಿಡುಗಡೆ ಮಾಡದಂತೆ ಒತ್ತಾಯಿಸಿ ಪ್ರ ತಿಭಟನೆ ನಡೆಸಿದರು.ಭಾರತೀಯ ಜನತಾ ಪಕ್ಷದ ಸಂಸದ ಕಿರೋಡಿ ಲಾಲ್ ಮೀನಾ ಕೂಡ ಸ್ಥ ಳಕ್ಕೆ ಅಗಮಿಸಿ ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಅಮಾಯಕ ಮಗುವಿಗೆ ನ್ಯಾಯ ಸಿಗುವರೆಗೂ ನಾವು ಬಿಡುವುದಿಲ್ಲ ಎಂದರು.
ಅಶೋಕ್ ಗೆಹ್ಲೋಟ್ ಸರ್ಕಾರದ ಅಧ್ಯಕ್ಷತೆಯಿಂದಾಗಿ ಪೊಲೀಸರು, ಚುನಾವಣೆಯಂತಹ ಸೂಕ್ಷ್ಮ ಸಂದರ್ಭದಲ್ಲೂ ದೌರ್ಜನ್ಯ ಎಸಗಲು ಹಿಂಜರಿಯುತ್ತಿಲ್ಲ ಎಂದು ಆರೋಪಿಸಿದರು.