Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ದೀಪಾವಳಿ ಹಬ್ಬಕ್ಕೆ ಯಶವಂತಪುರ ಮತ್ತು ಬೀದರ್ ನಡುವೆ ವಿಶೇಷ ಟ್ರೈನ್.! ಎಷ್ಟು ಗಂಟೆಗೆ ಬಿಡುತ್ತೆ ಎಂಬ ಮಾಹಿತಿ.!

 

ಬೆಂಗಳೂರು : ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಜನದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ  ಯಶವಂತಪುರ ಮತ್ತು ಬೀದರ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಈ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕವಾಗಿ ಅಳವಡಿಸಲಾಗಿದೆ.ರೈಲು ಸಂಖ್ಯೆ 06507: ಯಶವಂತಪುರ-ಬೀದರ್ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 13 ರಂದು ರಾತ್ರಿ 11:15 ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಮಧ್ಯಾಹ್ನ 12:15 ಕ್ಕೆ ಬೀದರ್ ತಲುಪಲಿದೆ. ರೈಲು ಮಾರ್ಗ: ಯಲಹಂಕ, ಗೌರಿಬಿದನೂರು, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಮಂತ್ರಾಲಯ ರಸ್ತೆ, ರಾಯಚೂರು, ಯಾದಗಿರಿ, ವಾಡಿ, ಶಹಾಬಾದ್ ಕಲಬುರಗಿ ಕಮಲಾಪುರ ಮತ್ತು ಹುಮನಾಬಾದ್‌ನಲ್ಲಿ ರೈಲು ನಿಲುಗಡೆಯಾಗಲಿದೆ.