Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಚನ : —ವಚನಭಂಡಾರಿ ಶಾಂತರಸ

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ನಿನ್ನ ಸೋದಿಸುವಡೆ ಎನ್ನ ಕೈಯಲ್ಲಿ ಆಗದು.

ಎಳ್ಳಿನೊಳಗಣ ಎಣ್ಣೆಯಂತೆ, ಹಣ್ಣಿನೊಳಗಣ ರುಚಿಯಂತೆ,

ಹೂವಿನೊಳಗಣ ಸಂಜ್ಞೆಯಂತೆ, ತರುಧರ ಅಗ್ನಿಯ ಕೂಟದಂತೆ,

ಕಂಡಡೆ ಕರಗಿ, ಕಾಣದಡೆ ಬಿರುಬಾಗಿ, ಇವರಂಗವ ಕಂಡು ಅಡಗಿದೆಯೆ ?

ನಿನ್ನ ಸಂಗವನರಿವುದಕ್ಕೆ ಎನ್ನಂಗದ ಇರವಾವುದು ?

ತನುವ ದಂಡಿಸುವುದಕ್ಕೆ ನೀ ಸರ್ವಮಯ, ನಿನ್ನ ಖಂಡಿಸುವದಕ್ಕೆ ನೀ ಪರಿಪೂರ್ಣ.

ಎನ್ನ ಮರೆದು, ನಿನ್ನ ಕಾಬುದಕ್ಕೆ ಒಳಗಿಲ್ಲ.

ನಿನ್ನ ಕಾಬುದಕ್ಕೆ ನೀ ಅಲೇಖಮಯ ಅನಂತಶೂನ್ಯ, ಕಲ್ಲಿನ ಮರೆಯಾದೆಯಲ್ಲಾ, ಎಲ್ಲರಿಗೆ ಅಂಜಿ.

 

-ವಚನಭಂಡಾರಿ ಶಾಂತರಸ