Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಭಯೋತ್ಪಾದಕರು ಅಡಗುತಾಣವಾಗಿ ಬಳಸುತ್ತಿದ್ದ ಗುಹೆಯ ಚಿತ್ರ ಹಂಚಿಸಿಕೊಂಡ ಸೇನೆ

ರಾಜೌರಿ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಅರಣ್ಯದಲ್ಲಿ ಭಯೋತ್ಪಾದಕರು ಅಡಗುತಾಣವಾಗಿ ಬಳಸುತ್ತಿರುವ ಸಣ್ಣ ಗುಹೆಯ ಚಿತ್ರಗಳನ್ನು ಭಾರತೀಯ ಸೇನೆ ಶುಕ್ರವಾರ ಹಂಚಿಕೊಂಡಿದೆ. ನವೆಂಬರ್ 22ರಂದು ನಡೆದ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯ ನಂತರ ಜಿಲ್ಲೆಯ ಬಾಜಿಮಾಲ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿರುವುದು ಉಲ್ಲೇಖಾರ್ಹ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಕೆಲವು ಮಾಹಿತಿಯ ಪ್ರಕಾರ, ಭಯೋತ್ಪಾದಕರು ಗುಹೆಗಳಲ್ಲಿ ರಹಸ್ಯವಾಗಿ ಕೆಲಸ ಮಾಡುವ ತರಬೇತಿ ಪಡೆದ ಸ್ನೈಪರ್ ಕೂಡ ಆಗಿದ್ದರು ಎನ್ನಲಾಗಿದೆ.

ಭದ್ರತಾ ಅಧಿಕಾರಿಗಳ ಪ್ರಕಾರ, ಇಂತಹ ಅಡಗುತಾಣಗಳನ್ನು ಪತ್ತೆ ಹಚ್ಚಿ ಒಳನುಗ್ಗುವುದು ತುಂಬಾ ಕಷ್ಟ . ಇದು ರಜೌರಿ ಪ್ರದೇಶದ ಅರಣ್ಯದಲ್ಲಿ ಭಯೋತ್ಪಾದಕರು ಅಡಗುತಾಣವಾಗಿ ಬಳಸುತ್ತಿರುವ ಸಣ್ಣ ಗುಹೆಯಾಗಿದೆ. ಇಂತಹ ಅಡಗುತಾಣಗಳನ್ನು ಪತ್ತೆಹಚ್ಚಲು ಮತ್ತು ಭೇದಿಸುವುದು ತುಲನಾತ್ಮಕವಾಗಿ ಕಷ್ಟಕರವಾಗಿದೆ ಎಂದು ಹೇಳಿದ್ದಾರೆ.

ನವೆಂಬರ್ 19 ರಂದು, ರಜೌರಿಯ ಪಶ್ಚಿಮ ನಿಹಾರಿ ತಾವಿಯ ಜನರಲ್ ಏರಿಯಾದಲ್ಲಿ ಇಬ್ಬರು ಭಯೋತ್ಪಾದಕರ ಇರುವ ಬಗ್ಗೆ ಭದ್ರತಾ ಏಜೆನ್ಸಿಗಳಿಗೆ ಮೊದಲ ಮಾಹಿತಿ ಸಿಕ್ಕಿತ್ತು. ಬುಧವಾರ ಮತ್ತು ಗುರುವಾರ ಭದ್ರತಾ ಪಡೆಗಳೊಂದಿಗೆ 36 ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಅಫ್ಘಾನಿಸ್ತಾನದಲ್ಲಿ ತರಬೇತಿ ಪಡೆದ ಲಷ್ಕರ್-ಎ-ತೈಬಾ (ಎಲ್‌ಇಟಿ) ಉನ್ನತ ಕಮಾಂಡರ್ ಸೇರಿದಂತೆ ಇಬ್ಬರು ಭಯೋತ್ಪಾದಕರು ಹತರಾಗಿದ್ದರು.

ಬಾಜಿಮಾಲ್ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಇಬ್ಬರು ಕ್ಯಾಪ್ಟನ್‌ಗಳು ಸೇರಿದಂತೆ ಐವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದರು. ಮೈಸೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್, ಉತ್ತರ ಪ್ರದೇಶದ ಆಗ್ರಾದ ಕ್ಯಾಪ್ಟನ್ ಶುಭಂ ಗುಪ್ತಾ, ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನ ಅಜೋಟೆಯ ಹವಾಲ್ದಾರ್ ಅಬ್ದುಲ್ ಮಜೀದ್, ಉತ್ತರಾಖಂಡದ ಎ ಹಳ್ಳಿ ಪಡ್ಲಿ ಪ್ರದೇಶದ ಲ್ಯಾನ್ಸ್ ನಾಯಕ್ ಸಂಜಯ್ ಬಿಸ್ಟ್ ಮತ್ತು ಉತ್ತರ ಪ್ರದೇಶದ ಪ್ಯಾರಾಟ್ರೂಪರ್ ಸಚಿನ್ ಹುತಾತ್ಮರಾಗಿದ್ದರು.