Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಿದ್ಯುತ್​ ಶಾರ್ಟ್​ ಸರ್ಕ್ಯೂಟ್: ಕೆ.ಜೆ.ಪಿ ಜ್ಯುವೆಲ್ಲರಿ ಶಾಪ್​ಗೆ ಬೆಂಕಿ

 

ಕೊಪ್ಪಳ:  ತಡರಾತ್ರಿ ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​ನಿಂದ ಜ್ಯುವೆಲ್ಲರಿ ಶಾಪ್​ಗೆ ಬೆಂಕಿ ತಗುಲಿ ಅಪಾರ ಮೌಲ್ಯದ ಚಿನ್ನಾಭರಣ, ವಸ್ತು ನಾಶವಾದ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿರುವ ಕೆ.ಜೆ.ಪಿ ಜ್ಯುವೆಲ್ಲರಿ ಶಾಪ್​ನಲ್ಲಿ ಸಂಭವಿಸಿದೆ.

ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಒಟ್ಟು ಮೂರು ಮಹಡಿಯಲ್ಲಿರುವ ಕೆಜೆಪಿ ಚಿನ್ನಾಭರಣ ಮತ್ತು ಬಟ್ಟೆ ಅಂಗಡಿಗಳಿಗೆ ಬೆಂಕಿ ತಗುಲಿದೆ. ರಾತ್ರಿ ಹನ್ನೆರಡು ಗಂಟೆಯಿಂದ ಬೆಂಕಿ ನಂದಿಸಲಾಗುತ್ತಿದೆ. ಸತತ ಏಳು ಗಂಟೆಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಬಟ್ಟೆ ಅಂಗಡಿಯಲ್ಲಿ ಇನ್ನೂ ಬೆಂಕಿ ಆರಿಲ್ಲ ಎಂದು ತಿಳಿದುಬಂದಿದೆ.