ಸಿಎಂ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಲೆಟರ್ ಸೃಷ್ಟಿ- ಎಫ್ಐಆರ್ ದಾಖಲು
ಬೆಂಗಳೂರು:ಸಿಎಂ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿದ ಪ್ರಕರಣ ಸಂಬಂದಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದೂರು ದಾಖಲಾಗಿದೆ.
ನಕಲಿ ಲೆಟರ್ ಹೆಡರ್ ಸೃಷ್ಟಿಸಿ ಸಿಎಂ ಕಚೇರಿಯಿಂದ ಲೋಕೋಪಯೋಗಿ ಸಚಿವರಿಗೆ ಕಡತವೊಂದನ್ನು ಕಳುಹಿಸಲಾಗಿದೆ. ಈ ಕಡತದಲ್ಲಿ ರಾಜೇಂದ್ರ ಹೆಸರಿನಲ್ಲಿ ಸಹಿ ಹಾಕಲಾಗಿದ್ದು, ಅಂಕಿತ್ ಎಂಬಾತನಿಗೆ ಇಲಾಖೆಯಲ್ಲಿ ತಾತ್ಕಾಲಿಕ ಕೆಲಸ ನೀಡುವಂತೆ ಉಲ್ಲೇಖಿಸಲಾಗಿದೆ.
ರಾಜೇಂದ್ರ ಎಂಬ ವ್ಯಕ್ತಿ ಮುಖ್ಯಮಂತ್ರಿಗಳ ಕಚೇರಿಯಲ್ಲಿಯೇ ಇಲ್ಲ. ಈ ಹಿನ್ನೆಲೆ ಸಿಎಂ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ರಾಜೇಂದ್ರ ಹಾಗೂ ಅಂಕಿತ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ