Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬಿಜೆಪಿ ಕಾರ್ಯಕರ್ತರ ಗುರಿಯಾಗಿಸಿ ನಡೆಯುವ ಹಲ್ಲೆ ಪ್ರಕರಣಗಳು ಹೆಚ್ಚುತ್ತಿದೆ -ವಿಜಯೇಂದ್ರ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರವು ಅಕ್ರಮಗಳ ವಿರುದ್ಧ ದನಿ ಎತ್ತುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಲ್ಲೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಕಲಬುರ್ಗಿ, ಬೆಳಗಾವಿಯ ಪ್ರಕರಣಗಳ ಬೆನ್ನಲೇ ಭದ್ರಾವತಿಯ ನಮ್ಮ ಬಿಜೆಪಿ ಮುಖಂಡ ಗೋಕುಲ್ ಕೃಷ್ಣನ್ ಅವರ ಮೇಲೆ ನಡೆದಿರುವ ಗೂಂಡಾಗಳ ಹಲ್ಲೆ ಆತಂಕಕಾರಿ ಘಟನೆಯಾಗಿದೆ ಎಂದರು.
ಭದ್ರಾವತಿಯಲ್ಲಿ ನಡೆಯುತ್ತಿರುವ ಅಕ್ರಮ ದಂಧೆಗಳಿಗೆ ಸ್ಥಳೀಯ ಶಾಸಕರ ಕೈವಾಡ ಇರುವ ಬಗ್ಗೆ ಜಾಲತಾಣದಲ್ಲಿ ಗೋಕುಲ್ ಕೃಷ್ಣನ್ ಪ್ರಶ್ನಿಸಿದ್ದೇ, ಈ ದಾಳಿ ನಡೆಯಲು ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡುವವರಿಗೆ ಕುಮ್ಮಕ್ಕು ನೀಡುತ್ತಿರುವಂತಿದೆ. ತಕ್ಷಣವೇ ಭದ್ರಾವತಿಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಮ್ಮ ಕಾರ್ಯಕರ್ತನಿಗೆ ರಕ್ಷಣೆ ನೀಡಿ, ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಕಿಡಿಕಾರಿದ್ದಾರೆ.