Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಹಿಳೆ ಬೆತ್ತಲೆಗೊಳಿಸಿ ಥಳಿತ: ದೂರು ದಾಖಲಿಸಿಕೊಂಡ ಹೈಕೋರ್ಟ್.!

 

ಬೆಂಗಳೂರು: ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಕಳೆದ ಭಾನುವಾರ ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸಲಾಗಿತ್ತು. ಈ ಸಂಬಂಧ ಹೈಕೋರ್ಟ್ ಇಂದು ಸ್ವಯಂ ಪ್ರೇರಿತ PIL ದಾಖಲಿಸಿಕೊಂಡು ಸರ್ಕಾರಕ್ಕೆ ವರದಿ ನೀಡುವಂತೆ ನೋಟಿಸ್‌ ಜಾರಿ ಮಾಡಿದೆ.

ಭಾರತ ಅಮೃತ ಕಾಲವನ್ನು ಆಚರಿಸುತ್ತಿದೆ. ಈ ನಡುವೆ ಪ್ರಗತೀಪರ ಕರ್ನಾಟಕದಲ್ಲಿ ಇಂತಹ ಘಟನೆ ನಡೆದಿರುವುದು ಕಳವಳಕಾರಿ ಎಂದಿದ್ದು, ಸಂತ್ರಸ್ತೆಯ ಫೋಟೋ, ವಿಡಿಯೋ ಬಿತ್ತರಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದೆ.