Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಇ.ಪಿ.ಎಸ್  ಪಿಂಚಣಿದಾರರು ಜೀವನ್ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

 

ದಾವಣಗೆರೆ, ಇ.ಪಿ.ಎಸ್ 1995 ರ ಪಿಂಚಣಿದಾರ ಫಲಾನುಭವಿಗಳು ಪ್ರತಿ ವರ್ಷ ನವೆಂಬರ್ ತಿಂಗಳಿನಲ್ಲಿ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗಿದ್ದು, ಆದರೆ ಈ ಸಾಲಿನಲ್ಲಿ ಜೀವನ್ ಪ್ರಮಾಣ ಪತ್ರದ ಸಲ್ಲಿಕೆಯಲ್ಲಿನ ವಿಳಂಬವು ಪಿಂಚಣಿಯ ನಿಲುಗಡೆಗೆ ಕಾರಣವಾಗುತ್ತದೆ.

ಇ.ಪಿ.ಎಫ್.ಒಗೆ ಜೀವನ್ ಪ್ರಮಾಣ ಪತ್ರವನ್ನು ವೆಬ್‍ಸೈಟ್  http://jeevanpramaan.gov.in/package/download      ಮೂಲಕ ಸಲ್ಲಿಸಿದ ನಂತರ ಬಾಕಿ ಪಿಂಚಣಿಯನ್ನು ಬಿಡುಗಡೆಗೊಳಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಯುಟ್ಯೂಬ್ ವೀಡಿಯೊ ಲಿಂಕ್  https://youtu.be/dobSgak421Q?si=eVEKWUCJToELdFoU FAT     ಮೂಲಕ ಜೀವನ್ ಪ್ರಮಾಣ ಪತ್ರ ಸಲ್ಲಿಕೆಯ ವಿಧಾನವನ್ನು ತಿಳಿಯಬಹುದು ಎಂದು ಶಿವಮೊಗ್ಗ ಪ್ರಾದೇಶಿಕ ಕಚೇರಿಯ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.