Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬಳ್ಳಾರಿಯಲ್ಲಿ 8 ಮಂದಿ ಶಂಕಿತ ಉಗ್ರರ ಬಂಧನ

NIA ಇಂದು ಬೆಳಗ್ಗೆ ಕರ್ನಾಟಕ ಸೇರಿ ದೇಶದ ಹಲವು ಕಡೆ ದಾಳಿ ನಡೆಸಿದ ಬೆನ್ನಲ್ಲೇ ದೊಡ್ಡ ಮಟ್ಟದ ಸ್ಫೋಟಕ್ಕೆ ಸಂಚು ರೂಪಿಸಿದ್ದ 8ಮಂದಿ ಶಂಕಿತ ಉಗ್ರರನ್ನು ಬಳ್ಳಾರಿಯಲ್ಲಿ ಬಂಧಿಸಲಾಗಿದೆ. ಈ ಉಗ್ರರು ಕಾಲೇಜು ಸೇರಿ ಹಲವೆಡೆ ಐಇಡಿ ಬ್ಲಾಸ್ಟ್ ಮಾಡುವುದಕ್ಕೆ ಸಂಚು ರೂಪಿಸಿದ್ದರು. ಆರೋಪಿಗಳಿಂದ ಬಾಂಬ್ ತಯಾರಿಕೆಗೆ ಬಳಸುವ ಸಲ್ಫರ್, ಪೊಟಾಷಿಯಂ ನೈಟ್ರೇಟ್, ಗನ್ ಪೌಡರ್, ಶಸ್ತ್ರಾಸ್ತ್ರ ಹಣ &ಪ್ರಮುಖ ದಾಖಲೆ ವಶಪಡಿಸಿಕೊಳ್ಳಲಾಗಿದೆ. ಬಂಧಿತರಲ್ಲಿ ಬಳ್ಳಾರಿ ಆಪರೇಷನ್‌ನ ನೇತೃತ್ವ ವಹಿಸಿದ್ದ ಮೊಹಮ್ಮದ್ ಸುಲೈಮಾನ್ ಕೂಡ ಸೇರಿರುವುದಾಗಿ ಮೂಲಗಳು ತಿಳಿಸಿವೆ.