–ಚಂದಿಮರಸ ಅವರ ವಚನ …!
ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.
ವಚನ: :
ಇಂದ್ರಿಯಂಗಳೊಡಗೂಡಿ ಬಹಿರ್ಮುಖನಾಗಿ
ವಿಷಯಂಗಳಲ್ಲಿ ಆಸಕ್ತಿಯುಳ್ಳವನು ಅಂತರ್ಮುಖ ರೂಪನಪ್ಪ,
ಪ್ರತ್ಯಗಾತ್ಮನನೆಂತೂ ಕಾಣಲರಿಯೆನು.
ಮೇರುಗಿರಿಯ ಕಂಡೆಹೆನೆಂದು ತೆಂಕಮುಖನಾಗಿ ನಡೆದು
ಮೇರುಗಿರಿಯ ಕಾಣಲರಿಯನೆಂತಂತೆ,
ಸಕಲ ವಿಷಯಾಸಕ್ತಿಯ ಬಿಟ್ಟು ನಿರ್ವಿಷಯಿಯಾಗಿ
ನಿಜದಲ್ಲಿ ನಿಂದ ನಿಲವು ನೀನೇ,ಸಿಮ್ಮಲಿಗೆಯ ಚೆನ್ನರಾಮಾ.
-ಚಂದಿಮರಸ