Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಮ ಭಕ್ತರು ಸಂಭ್ರಮಿಸದಂತೆ 144 ಸೆಕ್ಷನ್ ಜಾರಿಗೆ ಸಿದ್ಧತೆ – ಕಾಂಗ್ರೆಸ್ ವಿರುದ್ಧ ಬಿಜೆಪಿ ಆರೋಪ

ಬೆಂಗಳೂರು: ಅಯೋಧ್ಯೆಯ ರಾಮಮಂದಿರ ಜ 22 ರಂದು ಅದ್ದೂರಿಯಾಗಿ ಉದ್ಗಾಟನೆಯಾಗಲಿದ್ದು ಇಡೀ ದೇಶವೇ ಹಬ್ಬದ ವಾತಾವರಣದಲ್ಲಿದ್ದು ಕಾಂಗ್ರೆಸ್ ರಾಜ್ಯದಲ್ಲಿ ಸಂಭ್ರಮವನ್ನು ಕೆಡಿಸಲು ಕುತಂತ್ರ ಹೆಣೆಯುತ್ತಿದೆ ಎಂದು ಬಿಜೆಪಿ ಆರೋಪಗಳನ್ನು ಮಾಡಿದೆ.

ಅಯೋಧ್ಯೆಗೆ ಹೋಗುವವರಿಗೆ ಗೋಧ್ರಾ ಘಟನೆಯನ್ನು ನೆನಪಿಸಿ, ಅದೇ ರೀತಿಯ ಬೆದರಿಕೆ ಹಾಕಲಾಗಿದೆ. ಶುಭ ಘಳಿಗೆ ವೇಳೆ ಕಾಂಗ್ರೆಸ್ ಸುಳ್ಳು ಸುದ್ಧಿ ಹಬ್ಬಿಸುವುದರಲ್ಲಿ ನಿರತವಾಗಿದೆ. ರಾಮಭಕ್ತರು ಸಂಭ್ರಮಿಸದಂತೆ ರಾಜ್ಯ ಸರ್ಕಾರ ತಂತ್ರ ರೂಪಿಸಿದೆ ಎಂದು ಬಿಜೆಪಿ ಆರೋಪಿಸಿದೆ.

ರಾಮ ಬಂಟ ಹನುಮನ ನಾಡಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರದ ದುರಾಡಳಿತಕ್ಕೆ, ಕುತಂತ್ರಕ್ಕೆ, ರಾಜ್ಯದ ಜನರು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ರಾಮ ಭಕ್ತರು ಸಂಭ್ರಮಿಸದಂತೆ 144 ಸೆಕ್ಷನ್ ಜಾರಿಗೆ ಸಿದ್ಧತೆ ನಡೆದಿದೆ. ರಾಮ ಮಂದಿರ ಉದ್ಘಾಟನೆಯ ದಿನ ರಾಜ್ಯಾದ್ಯಂತ ವಿದ್ಯುತ್ ಸ್ಥಗಿತಗೊಳಿಸಲು ತಂತ್ರ ಹೆಣೆಯಲಾಗಿದೆ. ಮನೆ ಮನೆಯ ಟಿವಿ ಕೇಬಲ್ ಸಂಪರ್ಕ ತಪ್ಪಿಸುವ ದುರುದ್ದೇಶ ಕಾಂಗ್ರೆಸ್‍ದಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.