Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನಾಳೆ ಶ್ರೀ ಕಾಳಿಕಾದೇವಿ ದೇವಸ್ಥಾನದಲ್ಲಿ 9ಕ್ಕೆ ಕಡೇ ಕಾರ್ತಿಕೋತ್ಸವ.!

 

ದಾವಣಗೆರೆ : ನಗರದ ಶ್ರೀ ಕಾಳಿಕಾದೇವಿ ರಸ್ತೆಯಲ್ಲಿರುವ ಶ್ರೀ ಕಾಳಿಕಾದೇವಿ ವಿಶ್ವಕರ್ಮ ದೇವಸ್ಥಾನದಲ್ಲಿ  ದಿನಾಂಕ 9-1-2024ರ ಮಂಗಳವಾರ ಶ್ರೀ ಕಾಳಿಕಾ ದೇವಿಯ ಕಡೇಕಾರ್ತಿಕೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಅಂದು ಬೆಳಿಗ್ಗೆ ಪ್ರಾತಃ ಕಾಲದಲ್ಲಿ ಶ್ರೀ ಅಮ್ಮನವರಿಗೆ ವೇದೋಕ್ತ ಪಂಚಾಮೃತ ಅಭಿಷೇಕ ವಿಶ್ವಕರ್ಮ ಅಷ್ಟೋತ್ತರ ಪೂಜೆ, ಪುಷ್ಪಾಲಂಕಾರ, ವಿಶೇಷ ಪೂಜಾ ಅಲಂಕಾರ, ಮಹಾಮಂಗಳಾರತಿ ಕಾರ್ಯಕ್ರಮ ನಡೆಯಲಿವೆ.

ರಾತ್ರಿ 8 ಗಂಟೆಗೆ ದೀಪಾರಾಧನೆ, ಕಡೇ ಕಾರ್ತಿಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.  ಸರ್ವಭಕ್ತಾದಿಗಳು, ಸಮಾಜ ಭಾಂದವರು ಭಾಗವಹಿಸಿ, ಶ್ರೀ ದೇವಿಯ ಕೃಪೆಗೆ ಪಾತ್ರರಾಗ ಬೇಕೆಂದು ದೇವಸ್ಥಾನ  ಆಡಳಿತ ಸಮಿತಿ ಟ್ರಸ್ಟ್ ಕೋರಿದೆ.