Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಶೂಟಿಂಗ್ ವೇಳೆ ಹೀರೋಗೆ ಭಾರೀ ಆಘಾತ.!

 

ಹೈದರಬಾದ್: ವೇಣು ಶ್ರೀರಾಮ್ ನಿರ್ದೇಶನದ ಚಿತ್ರದಲ್ಲಿ ನಟಿಸುತ್ತಿರುವ ನಟ ನಿತಿನ್ ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ.

ಆಂಧ್ರದ ಮರೆಡುಮಿಲ್ಲಿ ಅರಣ್ಯದಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಅದ್ಧೂರಿ ಆಕ್ಷನ್ ಸೀಕ್ವೆನ್ಸ್ ಚಿತ್ರೀಕರಣದ ವೇಳೆ ನಿತಿನ್ ಕೈಗೆ ಗಾಯ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

ಅವರನ್ನು ಪರೀಕ್ಷಿಸಿದ ವೈದ್ಯರು ಮೂರು ವಾರಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆಂದು ವರದಿಯಾಗಿದೆ. ಇದರಿಂದ ಚಿತ್ರೀಕರಣ ಸ್ಥಗಿತಗೊಂಡಿದೆ.