Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಿಜಯನಗರ ಜಿಲ್ಲೆಯ ನೂತನ ವಾರ್ತಾಧಿಕಾರಿಯಾಗಿ ಗವಿಸಿದ್ದಪ್ಪ ಹೊಸಮನಿ ಅಧಿಕಾರ ಸ್ವೀಕಾರ

 

ಹೊಸಪೇಟೆ: ವಿಜಯನಗರ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಗವಿಸಿದ್ದಪ್ಪ ಹೊಸಮನಿ ಅವರು ಇತ್ತೀಚೆಗೆ ಅಧಿಕಾರ ಸ್ವೀಕರಿಸಿದರು.

ಮೂಲತಃ ಕೊಪ್ಪಳ ಜಿಲ್ಲೆಯವರಾದ ಗವಿಸಿದ್ದಪ್ಪ ಅವರು ಈ ಮೊದಲು ಬೀದರ, ವಿಜಯಪುರ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಜಿಲ್ಲಾ ವಾರ್ತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಲೇಖಕರು ಆಗಿರುವ ಗವಿಸಿದ್ದಪ್ಪ ಅವರು ಕಥಾ ಸಂಕಲನ ಪ್ರಕಟಿಸಿದ್ದಾರೆ.

ಬಿ. ಧನಂಜಯಪ್ಪ ಅವರು ಈ ಮೊದಲು ವಿಜಯನಗರ ಜಿಲ್ಲೆಯ ವಾರ್ತಾಧಿಕಾರಿಯಾಗಿದ್ದರು.