Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಸಿದ್ದರಾಮಯ್ಯ ಸರ್ಕಾರ ಅಘೋಷಿತ ಗ್ಯಾರಂಟಿಗಳನ್ನೂ ಜಾರಿಗೊಳಿಸಿದೆ’ – ಸಿಟಿ ರವಿ ಆರೋಪ

ಬೆಂಗಳೂರು: ಘೋಷಿತ ಗ್ಯಾರಂಟಿಗಳಲ್ಲದೆ ಕೆಲ ಅಘೋಷಿತ ಗ್ಯಾರಂಟಿಗಳನ್ನು ಸಿದ್ದರಾಮಯ್ಯ ಸರ್ಕಾರ ಜಾರಿಗೊಳಿಸಿದೆ ಎಂದು ಬಿಜೆಪಿ ನಾಯಕ ಸಿಟಿ ರವಿ ಆರೋಪಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಇಂದು 5ನೇ ಗ್ಯಾರಂಟಿ ಜಾರಿಗೊಳಿಸಿರುವ ಸಿದ್ದರಾಮಯ್ಯ ಅವರ ಸರ್ಕಾರ ನುಡಿದಂತೆ ನಡೆದಿಲ್ಲ. ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರು ಎಲ್ಲ ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುವ ಗ್ಯಾರಂಟಿ ನೀಡಿದ್ದರು. ನುಡಿದಂತೆ ನಡೆದಿದ್ದೇವೆ ಅಂತ ಸರ್ಕಾರ ಸುಳ್ಳು ಹೇಳುತ್ತಿದೆ ಎಂದರು.

ಇನ್ನು ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುವ ಗ್ಯಾರಂಟಿ ಸರ್ಕಾರ ನೀಡಿತ್ತು, ಆದರೆ ಈಗ ಕೇವಲ 2022-23 ಸಾಲಿನ ಪದವೀಧರರಿಗೆ ಮಾತ್ರ ಯುವನಿಧಿ ಯೋಜನೆಯಡಿ ಲಾಭಾರ್ಥಿಗಳೆಂದು ಪರಿಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಘೋಷಿತ ಗ್ಯಾರಂಟಿಗಳಲ್ಲದೆ ಕೆಲ ಅಘೋಷಿತ ಗ್ಯಾರಂಟಿಗಳನ್ನು ಸಿದ್ದರಾಮಯ್ಯ ಸರ್ಕಾರ ಜಾರಿಗೊಳಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.