Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ದೈಹಿಕ ವಿಕಲಚೇತನರಿಗಾಗಿ ಬ್ಯಾಟರಿ ಚಾಲಿತ ವೀಲ್‌ಚೇರ್‌ಗಾಗಿ ಅರ್ಜಿ ಆಹ್ವಾನ

 

ಹೊಸಪೇಟೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿನ ವಿಕಲಚೇತನರ ದೈಹಿಕ ವಿಕಲಚೇತನರಿಗಾಗಿ ಅನುಷ್ಠಾನಗೊಳಿಸುತ್ತಿರುವ ವೀಲ್ ಚೇರ್ ಯೋಜನೆಯಡಿ ಬ್ಯಾಟರಿ ಚಾಲಿತ ವೀಲ್‌ಚೇರ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ದೈಹಿಕ ವಿಕಲಚೇತನರು ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ವಿ.ಆರ್.ಡಬ್ಲೂ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯಲ್ಲಿನ ಯು.ಆರ್.ಡಬ್ಲೂ ಹಾಗೂ ತಾಲೂಕು ಪಂಚಾಯಿತಿಯಲ್ಲಿರುವ ಎಂ.ಆರ್.ಡಬ್ಲೂಗಳಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ಜನವರಿ 30ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ತಾಲೂಕು ಪಂಚಾಯಿತಿ ಆವರಣ, ಸಂಡೂರು ರಸ್ತೆ, ಹೊಸಪೇಟೆ ಹಾಗೂ ವಿಜಯನಗರ ಜಿಲ್ಲೆಯ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲೂಗಳಾದ ಹೊಸಪೇಟೆ ಮೊ.ಸಂ: 9945252991, ಹಗರಿಬೊಮ್ಮನಹಳ್ಳಿ ಮೊ.ಸಂ: 9741185924, ಕೂಡ್ಲಿಗಿ ಮೊ.ಸಂ: 8217626361, ಹಡಗಲಿ ಮೊ.ಸಂ: 9900890403, ಕೊಟ್ಟೂರು ಮೊ.ಸಂ: 7353974518, ಹರಪನಹಳ್ಳಿ ಮೊ.ಸಂ: 9901182525, ಇವರಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಅವಿನಾಶಲಿಂಗ ಎಸ್.ಗೋಟಖಿಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.