Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಷ್ಟ್ರೀಯ ಆರೋಗ್ಯ ಅಭಿಯಾನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಹೊಸಪೇಟೆ : ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಡಿ.ಎಂ.ಹೆಚ್.ಪಿ ಫಿಜಿಚಿಯಾಟ್ರೀಸ್ಟ್, ಟಿ.ಎಂ.ಹೆಚ್.ಪಿ ಫಿಜಿಚಿಯಾಟ್ರೀಸ್ಟ್, ಫಿಜಿಚಿಯಾಟ್ರೀಸ್ಟ್ ಸೋಶಿಯಲ್ ವರ್ಕರ್ ಹಾಗೂ ಪ್ರೋಗ್ರಾಮರ್/ ಆಪ್ರೇಷ್ನಲ್ ಮ್ಯಾನೇಜರ್ ತಲಾ ಒಂದು ಹುದ್ದೆಗಳು ಖಾಲಿಯಿದ್ದು ಹುದ್ದೆಗಳ ಸಂಖ್ಯೆಯಲ್ಲಿ ಹೆಚ್ಚುಗೊಳಿಸುವುದು ಅಥವಾ ಕಡಿಮೆಗೊಳಿಸುವುದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ನಿರ್ಧಾರದಂತಿರುತ್ತದೆ.

ಆಯ್ಕೆಯ ಪ್ರಕ್ರಿಯೆ ಯಾವುದೇ ಬದಲಾವಣೆಯಾದರೂ ಆಯ್ಕೆ ಸಮಿತಿ ತಿರ್ಮಾನವೇ ಅಂತಿಮವಾಗಿರುತ್ತದೆ. ಕೋವಿಡ್-19 ರಲ್ಲಿ ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುವುದು. 6 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇ.2, 6 ತಿಂಗಳು 1 ದಿನದಿಂದ 12 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇ.4, 12 ತಿಂಗಳು 1 ದಿನದಿಂದ 18 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇ.6, 18 ತಿಂಗಳು 1 ದಿನದಿಂದ 24 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇ.8ರ ಕೃಪಾಂಕವನ್ನು ನೀಡಲಾಗುವುದು. ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಶೇಕಡ ಮತ್ತು ಕೋವಿಡ್-19 ಸೇವಾ ಅವಧಿಯ ಕೃಪಾಂಕವನ್ನು ಒಟ್ಟುಗೂಡಿಸಿ ಮೇರಿಟ್ ಲಿಸ್ಟ್ನ್ನು ತಯಾರಿಸಲಾಗುವುದು ಮತ್ತು ಹೊಸ ರೋಸ್ಟರ್ ಆಧಾರ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ನೇಮಕಾತಿ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ದೃಢೀಕರಿಸಿದ ಎಲ್ಲಾ ದಾಖಲಾತಿಗಳ ಪ್ರತಿಗಳೊಂದಿಗೆ ಕಚೇರಿ ಸಮಯದಲ್ಲಿ ಅರ್ಜಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಯು ವಿಜಯನಗರ ವೆಬ್ ಸೈಟ್

(https://vijayanagara̤nic̤in/)ನಲ್ಲಿ ಲಭ್ಯವಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಪ್ರಕಟಣೆ ತಿಳಿಸಿದೆ.