Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಣಿಪುರದಲ್ಲಿ ಮತ್ತೆ ಮುಂದುವರೆದ ಹಿಂಸಾಚಾರ – ಐವರು ನಾಗರಿಕರು ಬಲಿ

ಮಣಿಪುರ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮುಂದುವರೆದಿದ್ದು, ಎರಡು ಪ್ರತ್ಯೇಕ ಘಟನೆಗಳಲ್ಲಿ ಅಪರಿಚಿತರು ಐವರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಓಯಿನಮ್ ಬಮೊನ್‌ಜಾವೊ ಸಿಂಗ್ (61), ಅವರ ಮಗ ಒಯಿನಮ್ ಮಣಿತೊಂಬ ಸಿಂಗ್ (32), ಥಿಯಂ ಸೋಮೇಂದ್ರೊ ಸಿಂಗ್ (55) ಮತ್ತು ನಿಂಗ್‌ತೌಜಮ್ ನಬದ್ವೀಪ್ ಸಿಂಗ್ (40) ಎಂದು ಗುರುತಿಸಲಾಗಿದೆ.

ಬಿಷ್ಣುಪುರ್ ಜಿಲ್ಲೆಯ ನಿಂಗ್‌ತೌಖೋಂಗ್ ಖಾ ಖುನೌದಲ್ಲಿ ನಾಲ್ವರು ನಾಗರಿಕರು ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಯ ಕಾಂಗ್‌ಚುಪ್ ಚಿಂಗ್‌ಖಾಂಗ್‌ನಲ್ಲಿ ಒಬ್ಬರನ್ನು ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಇನ್ನು ಐವರನ್ನು ಹತ್ಯೆ ಮಾಡಿರುವ ಹಂತಕರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.