ಕಾಂಗ್ರೇಸ್ ಬಿಟ್ಟು ಮತ್ತೆ ಬಿಜೆಪಿಗೆ ಘರ್ ಪಾಪ್ಸಿ ಆದ ಜಗದೀಶ್ ಶೆಟ್ಟರ್
ನವದೆಹಲಿ: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಪಕ್ಷದ ವಿರುದ್ದ ತಿರುಗಿ ಬಿದ್ದು ಕಾಂಗ್ರೇಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇದೀಗ ಮತ್ತೆ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ.
ಇಂದು ಕಾಂಗ್ರೆಸ್ಗೆ ರಾಜೀನಾಮೆ ನೀಡುವುದರ ಜೊತೆಗೆ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ದೆಹಲಿಯಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿರುವ ಶೆಟ್ಟರ್, ಜೆಪಿ ನಡ್ಡಾ ನೇತೃತ್ವದಲ್ಲಿ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ.
ವಿಧಾನಪರಿಷತ್ತು ಸದಸ್ಯತ್ವಕ್ಕೆ ರಾಜೀನಾಮೆ: ಕರ್ನಾಟಕ ವಿಧಾನಪರಿಷತ್ತು ಸದಸ್ಯತ್ವಕ್ಕೆ ಈ ದಿನ ನಾನು ನನ್ನ ಸ್ವ-ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ.