Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಶೆಟ್ಟರ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಯಾವುದೇ ಹಾನಿ ಇಲ್ಲ’- ಎಂ.ಬಿ.ಪಾಟೀಲ್

ವಿಜಯಪುರ: ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಹಾನಿ ಇಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಜಗದೀಶ ಶೆಟ್ಟರ್ ಅವಮಾನಿತರಾಗಿದ್ದರು. ಆಗ ನಾನು, ಡಿ.ಕೆ‌.ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಹಲವರು ಜಗದೀಶ ಶೆಟ್ಟರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರಲು ಶ್ರಮಿಸಿದ್ದೆವು ಎಂದರು.

ಇನ್ನು ವಿಧಾನಸಭೆ ಟಿಕೆಟ್ ಕೊಟ್ಟ ಬಳಿಕ ಸೋತರೂ ಜಗದೀಶ ಶೆಟ್ಟರ್ ಅವರನ್ನು ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್ ಶಾಸಕರಾಗಿ ಮಾಡಿತ್ತು. ಇಷ್ಟೆಲ್ಲ ಗೌರವ ನೀಡಿದರೂ ಏಕಾಏಕಿ ಬಿಜೆಪಿ ಸೇರ್ಪಡೆಯಾಗಿರುವುದು ಏಕೆಂದು ಗೊತ್ತಿಲ್ಲ ಎಂದಿದ್ದಾರೆ.