Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಹಾಘಟಬಂಧನ್ ಮೈತ್ರಿ ತೊರೆದ ನಿತೀಶ್ ಕುಮಾರ್ ವಿರುದ್ಧ ಲಾಲು ಪುತ್ರಿ ಆಕ್ರೋಶ

ಪಾಟ್ನಾ:ಬಿಹಾರದಲ್ಲಿ ಮಹಾಘಟಬಂಧನ್ ಮೈತ್ರಿ ತೊರೆದು ಹೋಗಿರುವ ನಿತೀಶ್ ಕುಮಾರ್ ವಿರುದ್ಧ ಲಾಲೂ ಪ್ರಸಾದ್ ಅವರ ಪುತ್ರಿ ಹಾಗೂ ಆರ್ಜೆಡಿ ನಾಯಕಿ ರೋಹಿಣಿ ಆಚಾರ್ಯ ಅವರು ಆಕ್ರೋಶ ಹೊರಹಾಕಿದ್ದಾರೆ.

ನಿತೀಶ್ ಕುಮಾರ್ ಅವರನ್ನು ಕಸಕ್ಕೆ ಹೋಲಿಸಿ ಟ್ವೀಟ್ ಮಾಡಿರುವ ಅವರು ಕಸವು ಮತ್ತೆ ಡಸ್ಟ್ಬಿನ್ ಗೆ ಹೋಗಿದೆ. ಗಬ್ಬು ನಾರುವ ಕಸವನ್ನು ಪಡೆದ ಡಸ್ಟ್ಬಿನ್ಗೆ ಅಭಿನಂದನೆಗಳು’ ಎಂದು ಅವರು ಈ ಪೋಸ್ಟ್ ಮಾಡಿದ್ದಾರೆ.

ನಿತೀಶ್ ಕುಮಾರ್ ಆರ್ಜೆಡಿ ತ್ಯಜಿಸುತ್ತಿದ್ದಂತೆ ರೋಹಿಣಿ ಅವರು ಈ ಪೋಸ್ಟ್ ಮಾಡಿದ್ದಾರೆ.

ಇದೀಗ ರಾಜ್ಯದಲ್ಲಿ ಬಿಜೆಪಿ-ಜೆಡಿ(ಯು) ಸರ್ಕಾರದ ಮುಖ್ಯಮಂತ್ರಿಯಾಗಿ ಮತ್ತೆ ಪ್ರಮಾಣ ವಚನ ಸ್ವೀಕರಿಸಲು ನಿತೀಶ್ ಕುಮಾರ್ ಸಜ್ಜಾಗಿದ್ದಾರೆ. ಈ ಮೂಲಕ ಅವರು 9ನೇ ಬಾರಿಗೆ ಮುಖ್ಯಮಂತ್ರಿಯಾಗಲಿದ್ದಾರೆ.